ಮಂಗಳೂರು:ನಗರದ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಆರಂಭವಾಗಿದೆ.
ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮಂಗಳೂರು ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ಉ ಪಸ್ಥಿತಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಗೆ ಇಬ್ಬರು ವಿಧಿ ವಿಜ್ಞಾನ ತಜ್ಞರನ್ನು ನಿಯೋಜಿಸಲಾಗಿದೆ ಎಂದು ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ತಿಳಿಸಿದರು.
ನಿಯಮಾವಳಿ ಪ್ರಕಾರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಹೆಚ್ಚಿನ ಪರೀಕ್ಷೆಗಾಗಿ ದೇಹದ ಕೆಲವು ಮಾದರಿಗಳನ್ನು ಸಂಗ್ರಹಿಸಲಾಗುವುದು ಎಂದರು.
ಬೆಳಿಗ್ಗೆ 10.30ರ ಸುಮಾರಿಗೆ ಮೃತದೇಹವನ್ನು ಮಂಗಳೂರಿನಿಂದ ಚಾರ್ಮಾಡಿ ಘಾಟಿ ಮಾರ್ಗವಾಗಿ ಮೂಡಿಗೆರೆಗೆ ಕೊಂಡೊಯ್ಯಲಾಗುತ್ತದೆ. ಬಳಿಕ ಸ್ವಗ್ರಾಮ ಚೇತನಹಳ್ಳಿಗೆ ಕೊಂಡೊಯ್ಯಲಾಗುತ್ತದೆ.