ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು, ದೇವರ ಉತ್ಸವ ಮೂರ್ತಿಯನ್ನು ಹೋಲುವ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ಚಿತ್ರವು ಲಾಂಛನದ ಮಧ್ಯ ಭಾಗದಲ್ಲಿದೆ. ಮೀನುಗಾರಿಕೆ ಸಚಿವ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಲಾಂಛನವನ್ನು ಅನಾವರಣಗೊಳಿಸಿದ್ದರು.