ಸುಬ್ರಹ್ಮಣ್ಯ: ಕನ್ನಡ ಚಿತ್ರ ರಂಗದ ಗಾಯಕ ವಿಜಯಪ್ರಕಾಶ್ ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು.
ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಅವರು ಶೇಷ ಸೇವೆ ನೆರವೇರಿಸಿದರು. ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಜಯರಾಮ ರಾವ್, ಗೋಪಿನಾಥ್ ನಂಬೀಶ ಇದ್ದರು.