<p><strong>ಮೂಡುಬಿದಿರೆ:</strong> ಸುಹಾಸ್ತಿ ಯುವ ಜೈನ್ ಮಿಲನ ಬೆಂಗಳೂರು ಮತ್ತು ಸಿಂಗಪುರ ಜೈನ್ ಮಿಲನ್ ಸಿಂಗಪುರದ ಆಲೋಫ್ಟ್ ನೊವೆನಾದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಜಿನ ಸಮ್ಮಿಲನ - 2025ರಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಕರ್ನಾಟಕದ ಅತ್ಯುತ್ತಮ ಶಿಕ್ಷಣ ಸಂಸ್ಥೆ -2025 ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಗುರುಕುಲ ಮಾದರಿ ಶಿಕ್ಷಣ, ಯೋಗ, ಭಜನೆ, ಧ್ಯಾನ, ಶಿಸ್ತಿನ ಜೀವನ ಪಾಠ, ಶೂನ್ಯ ತ್ಯಾಜ್ಯ ಆವರಣ, 13 ವರ್ಷಗಳಿಂದ ಪ್ರತಿ ವರ್ಷವೂ ರಾಜ್ಯಮಟ್ಟದಲ್ಲಿ 10ರಿಂದ 15 ರ್ಯಾಂಕ್, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ, ಆಡಳಿತ ಮಂಡಳಿ- ಉಪನ್ಯಾಸಕ ಹಾಗೂ ವಿದ್ಯಾರ್ಥಿಗಳ ಮಧ್ಯೆ ಉತ್ತಮ ಬಾಂಧವ್ಯ ಪರಿಗಣಿಸಿ ಈ ಪ್ರಶಸ್ತಿ ಪ್ರದಾನಮಾಡಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮನ್ವಿತ್ ರಾಜ್ ಜೈನ್ ಪ್ರಶಸ್ತಿಯನ್ನು ಸ್ವೀಕರಿಸಿದರು.</p>.<p>ಕಾರ್ಯಕ್ರಮದಲ್ಲಿ ಕರ್ನಾಟಕದಿಂದ 275 ಪ್ರತಿನಿಧಿಗಳು, ಸಿಂಗಪುರದ ಜೈನ ಸಮುದಾಯವರು ಭಾಗವಹಿಸಿದ್ದರು.</p>.<p>ದಿಗಂಬರ ಜೈನ ಮಠ ವರೂರಿನ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮಿ, ದಿಗಂಬರ ಜೈನ ಮಠ ಆರತಿಪುರದ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಭಾರತೀಯ ಜೈನ್ ಮಿಲನ್ ನವದೆಹಲಿಯ ರಾಷ್ಟ್ರೀಯ ಕಾರ್ಯಧ್ಯಕ್ಷ ಡಿ.ಸುರೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಜೈನ್ ಮಿಲನ್ ನವದೆಹಲಿ ಅಂತರರಾಷ್ಟ್ರೀಯ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷರಾದ ಎನ್.ಪ್ರಸನ್ನಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಸುಹಾಸ್ತಿ ಯುವ ಜೈನ್ ಮಿಲನ ಬೆಂಗಳೂರು ಮತ್ತು ಸಿಂಗಪುರ ಜೈನ್ ಮಿಲನ್ ಸಿಂಗಪುರದ ಆಲೋಫ್ಟ್ ನೊವೆನಾದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಜಿನ ಸಮ್ಮಿಲನ - 2025ರಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಕರ್ನಾಟಕದ ಅತ್ಯುತ್ತಮ ಶಿಕ್ಷಣ ಸಂಸ್ಥೆ -2025 ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಗುರುಕುಲ ಮಾದರಿ ಶಿಕ್ಷಣ, ಯೋಗ, ಭಜನೆ, ಧ್ಯಾನ, ಶಿಸ್ತಿನ ಜೀವನ ಪಾಠ, ಶೂನ್ಯ ತ್ಯಾಜ್ಯ ಆವರಣ, 13 ವರ್ಷಗಳಿಂದ ಪ್ರತಿ ವರ್ಷವೂ ರಾಜ್ಯಮಟ್ಟದಲ್ಲಿ 10ರಿಂದ 15 ರ್ಯಾಂಕ್, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ, ಆಡಳಿತ ಮಂಡಳಿ- ಉಪನ್ಯಾಸಕ ಹಾಗೂ ವಿದ್ಯಾರ್ಥಿಗಳ ಮಧ್ಯೆ ಉತ್ತಮ ಬಾಂಧವ್ಯ ಪರಿಗಣಿಸಿ ಈ ಪ್ರಶಸ್ತಿ ಪ್ರದಾನಮಾಡಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮನ್ವಿತ್ ರಾಜ್ ಜೈನ್ ಪ್ರಶಸ್ತಿಯನ್ನು ಸ್ವೀಕರಿಸಿದರು.</p>.<p>ಕಾರ್ಯಕ್ರಮದಲ್ಲಿ ಕರ್ನಾಟಕದಿಂದ 275 ಪ್ರತಿನಿಧಿಗಳು, ಸಿಂಗಪುರದ ಜೈನ ಸಮುದಾಯವರು ಭಾಗವಹಿಸಿದ್ದರು.</p>.<p>ದಿಗಂಬರ ಜೈನ ಮಠ ವರೂರಿನ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮಿ, ದಿಗಂಬರ ಜೈನ ಮಠ ಆರತಿಪುರದ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಭಾರತೀಯ ಜೈನ್ ಮಿಲನ್ ನವದೆಹಲಿಯ ರಾಷ್ಟ್ರೀಯ ಕಾರ್ಯಧ್ಯಕ್ಷ ಡಿ.ಸುರೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಜೈನ್ ಮಿಲನ್ ನವದೆಹಲಿ ಅಂತರರಾಷ್ಟ್ರೀಯ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷರಾದ ಎನ್.ಪ್ರಸನ್ನಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>