ನಗರದ ಶಾಂತಿ ಪ್ರಕಾಶನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ’ಒಗ್ಗಟ್ಟನ್ನು ಬಲಪಡಿಸೋಣ, ಮಾನವೀಯತೆಯನ್ನು ಎತ್ತಿ ಹಿಡಿಯೋಣ’ ಎಂಬ ಘೋಷವಾಕ್ಯದಡಿ ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ಸದ್ಯದ ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ನವದೆಹಲಿ, ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಈಗ ಕರ್ನಾಟಕಕ್ಕೆ ಪ್ರವೇಶ ಮಾಡಲಾಗಿದೆ ಎಂದು ತಿಳಿಸಿದರು.