<p><strong>ಉಜಿರೆ</strong>: ‘ಸತ್ಯದ ಸತ್ವ ಪರೀಕ್ಷೆಯ ಕಾಲ ಇದಾಗಿದ್ದು, ಎಸ್ಐಟಿ ತನಿಖೆಯಿಂದ ಹಲವು ಸತ್ಯಾಂಶಗಳು ನ್ಯಾಯಯುತವಾಗಿ, ನಮಗೆ ಪೂರಕವಾಗಿ ಪ್ರಕಟವಾಗುತ್ತಿದೆ. ಈ ಮೂಲಕ ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸದಾಯಕವಾಗಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜೈನ ಸಮುದಾಯದವರು ಬೆಳ್ತಂಗಡಿ ತಾಲ್ಲೂಕು ಜೈನಸಮಾಜದ ಆಶ್ರಯದಲ್ಲಿ ಧರ್ಮಸ್ಥಳಕ್ಕೆ ವಾಹನ ಜಾಥಾದಲ್ಲಿ ಬಂದಾಗ ಅವರನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಧರ್ಮಸ್ಥಳದಲ್ಲಿ ಹುಟ್ಟಿದ ನಮ್ಮ ಕುಟುಂಬಸ್ಥರೆಲ್ಲರೂ ಭಾಗ್ಯವಂತರು. ಭಗವಾನ್ ಚಂದ್ರನಾಥ ಸ್ವಾಮಿ, ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ಹಾಗೂ ಧರ್ಮದೇವತೆಗಳ ಸೇವೆ ಮಾಡುವ ಸುವರ್ಣಾವಕಾಶ ದೊರೆತಿರುವುದು ಬದುಕಿನ ಸೌಭಾಗ್ಯವಾಗಿದೆ’ ಎಂದರು.</p>.<p>ವಾಹನ ಜಾಥಾ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದ ಮೂರು ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ತಂದ ಪ್ರಸಾದವನ್ನು ಹೆಗ್ಗಡೆ ಮತ್ತು ಕುಟುಂಬಸ್ಥರಿಗೆ ಬಸದಿಯ ಪ್ರಧಾನ ಅರ್ಚಕ ಕೆ.ಜಯರಾಜ ಇಂದ್ರ ಮತ್ತು ಬಳಗದವರು ನೀಡಿದರು.</p>.<p>ಬಳಿಕ ವಿಶ್ವಶಾಂತಿಗಾಗಿ 9ಬಾರಿ ಪಂಚನಮಸ್ಕಾರ ಮಂತ್ರದ ಸಾಮೂಹಿಕ ಪಠಣ ಮಾಡಲಾಯಿತು.</p>.<p>ನಂತರ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಗೆ ತೆರಳಿ ಪಂಚನಮಸ್ಕಾರ ಮಂತ್ರವನ್ನು ಪಠಿಸಿದರು.</p>.<p>ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ.ನೀತಾ ರಾಜೇಂದ್ರ ಕುಮಾರ್, ಅಮಿತ್, ಶ್ರದ್ಧಾ ಅಮಿತ್, ಡಿ.ಶ್ರೇಯಸ್ ಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ</strong>: ‘ಸತ್ಯದ ಸತ್ವ ಪರೀಕ್ಷೆಯ ಕಾಲ ಇದಾಗಿದ್ದು, ಎಸ್ಐಟಿ ತನಿಖೆಯಿಂದ ಹಲವು ಸತ್ಯಾಂಶಗಳು ನ್ಯಾಯಯುತವಾಗಿ, ನಮಗೆ ಪೂರಕವಾಗಿ ಪ್ರಕಟವಾಗುತ್ತಿದೆ. ಈ ಮೂಲಕ ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸದಾಯಕವಾಗಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜೈನ ಸಮುದಾಯದವರು ಬೆಳ್ತಂಗಡಿ ತಾಲ್ಲೂಕು ಜೈನಸಮಾಜದ ಆಶ್ರಯದಲ್ಲಿ ಧರ್ಮಸ್ಥಳಕ್ಕೆ ವಾಹನ ಜಾಥಾದಲ್ಲಿ ಬಂದಾಗ ಅವರನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಧರ್ಮಸ್ಥಳದಲ್ಲಿ ಹುಟ್ಟಿದ ನಮ್ಮ ಕುಟುಂಬಸ್ಥರೆಲ್ಲರೂ ಭಾಗ್ಯವಂತರು. ಭಗವಾನ್ ಚಂದ್ರನಾಥ ಸ್ವಾಮಿ, ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ಹಾಗೂ ಧರ್ಮದೇವತೆಗಳ ಸೇವೆ ಮಾಡುವ ಸುವರ್ಣಾವಕಾಶ ದೊರೆತಿರುವುದು ಬದುಕಿನ ಸೌಭಾಗ್ಯವಾಗಿದೆ’ ಎಂದರು.</p>.<p>ವಾಹನ ಜಾಥಾ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದ ಮೂರು ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ತಂದ ಪ್ರಸಾದವನ್ನು ಹೆಗ್ಗಡೆ ಮತ್ತು ಕುಟುಂಬಸ್ಥರಿಗೆ ಬಸದಿಯ ಪ್ರಧಾನ ಅರ್ಚಕ ಕೆ.ಜಯರಾಜ ಇಂದ್ರ ಮತ್ತು ಬಳಗದವರು ನೀಡಿದರು.</p>.<p>ಬಳಿಕ ವಿಶ್ವಶಾಂತಿಗಾಗಿ 9ಬಾರಿ ಪಂಚನಮಸ್ಕಾರ ಮಂತ್ರದ ಸಾಮೂಹಿಕ ಪಠಣ ಮಾಡಲಾಯಿತು.</p>.<p>ನಂತರ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಗೆ ತೆರಳಿ ಪಂಚನಮಸ್ಕಾರ ಮಂತ್ರವನ್ನು ಪಠಿಸಿದರು.</p>.<p>ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ.ನೀತಾ ರಾಜೇಂದ್ರ ಕುಮಾರ್, ಅಮಿತ್, ಶ್ರದ್ಧಾ ಅಮಿತ್, ಡಿ.ಶ್ರೇಯಸ್ ಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>