<p><strong>ಮಂಗಳೂರು:</strong> ಉಜಿರೆ ಗ್ರಾಮದ ಬಿಲ್ಲರೋಡಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ 2018ರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಮರುತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಗ್ರಾಮದ ಭಾಸ್ಕರ ಬಡೆಕೊಟ್ಟು ಎಂಬುವರು ವಿಶೇಷ ತನಿಖಾ ತಂಡಕ್ಕೆ ಬುಧವಾರ ದೂರು ನೀಡಿದ್ದಾರೆ. </p>.<p>ಈ ಬಗ್ಗೆ ಹಿಂಬರಹ ನೀಡಿರುವ ಎಸ್ಐಟಿ ಸಹಾಯಕ ತನಿಖಾಧಿಕಾರಿ, ಈ ಕುರಿತ ದೂರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.</p>.<p>‘ಉಜಿರೆ ಬಿಲ್ಲರೋಡಿ ಎಂಬಲ್ಲಿ ಸೋಂಪ ಯಾನೆ ಬಾಲಕೃಷ್ಣ ಗೌಡ ಎಂಬುವರು ನಾಪತ್ತೆಯಾಗಿದ್ದರು. ಆ ಬಗ್ಗೆ ಅವರ ಕುಟುಂಬದವರು ಪೊಲೀಸರಿಗೆ ದೂರು ನೀಡಿರಲಿಲ್ಲ. ಅವರು ಕೊಲೆಯಾಗಿರಬಹುದು ಎಂದು ಊರವರಿಗೆ ಸಂಶಯ ಇತ್ತು. ಅದೇ ವೇಳೆ ಸರ್ಕಾರಿ ಜಾಗದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಬಾಲಕೃಷ್ಣ ಗೌಡ ನಾಪತ್ತೆಯಾದ ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದೆವು. </p><p>ಆದರೆ, ಈ ಬಗ್ಗೆ ಸಮರ್ಪಕ ತನಿಖೆ ನಡೆದಿಲ್ಲ. ಸಂಶಯಾಸ್ಪದ ಸಾವುಗಳ ಬಗ್ಗೆ ತಿಳಿಸುವಂತೆ ಎಸ್ಐಟಿಯವರು ಕೋರಿದ್ದರು. ಹಾಗಾಗಿ ಎಸ್ಐಟಿ ತನಿಖಾಧಿಕಾರಿಗೆ ಈ ಬಗ್ಗೆ ದೂರು ನೀಡಿ ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿದ್ದೇವೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಯಾರ ಹೆಸರನ್ನೂ ಬಹಿರಂಗಪಡಿಸಲು ಬಯಸುವುದಿಲ್ಲ’ ಎಂದು ಭಾಸ್ಕರ ಬಡೆಕೊಟ್ಟು ಸುದ್ದಿಗಾರರಿಗೆ ತಿಳಿಸಿದರು.</p>.<p>ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಪ್ರಭಾವಿಯೊಬ್ಬರ ವಿರುದ್ಧ ಇವರು ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಉಜಿರೆ ಗ್ರಾಮದ ಬಿಲ್ಲರೋಡಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ 2018ರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಮರುತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಗ್ರಾಮದ ಭಾಸ್ಕರ ಬಡೆಕೊಟ್ಟು ಎಂಬುವರು ವಿಶೇಷ ತನಿಖಾ ತಂಡಕ್ಕೆ ಬುಧವಾರ ದೂರು ನೀಡಿದ್ದಾರೆ. </p>.<p>ಈ ಬಗ್ಗೆ ಹಿಂಬರಹ ನೀಡಿರುವ ಎಸ್ಐಟಿ ಸಹಾಯಕ ತನಿಖಾಧಿಕಾರಿ, ಈ ಕುರಿತ ದೂರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.</p>.<p>‘ಉಜಿರೆ ಬಿಲ್ಲರೋಡಿ ಎಂಬಲ್ಲಿ ಸೋಂಪ ಯಾನೆ ಬಾಲಕೃಷ್ಣ ಗೌಡ ಎಂಬುವರು ನಾಪತ್ತೆಯಾಗಿದ್ದರು. ಆ ಬಗ್ಗೆ ಅವರ ಕುಟುಂಬದವರು ಪೊಲೀಸರಿಗೆ ದೂರು ನೀಡಿರಲಿಲ್ಲ. ಅವರು ಕೊಲೆಯಾಗಿರಬಹುದು ಎಂದು ಊರವರಿಗೆ ಸಂಶಯ ಇತ್ತು. ಅದೇ ವೇಳೆ ಸರ್ಕಾರಿ ಜಾಗದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಬಾಲಕೃಷ್ಣ ಗೌಡ ನಾಪತ್ತೆಯಾದ ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದೆವು. </p><p>ಆದರೆ, ಈ ಬಗ್ಗೆ ಸಮರ್ಪಕ ತನಿಖೆ ನಡೆದಿಲ್ಲ. ಸಂಶಯಾಸ್ಪದ ಸಾವುಗಳ ಬಗ್ಗೆ ತಿಳಿಸುವಂತೆ ಎಸ್ಐಟಿಯವರು ಕೋರಿದ್ದರು. ಹಾಗಾಗಿ ಎಸ್ಐಟಿ ತನಿಖಾಧಿಕಾರಿಗೆ ಈ ಬಗ್ಗೆ ದೂರು ನೀಡಿ ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿದ್ದೇವೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಯಾರ ಹೆಸರನ್ನೂ ಬಹಿರಂಗಪಡಿಸಲು ಬಯಸುವುದಿಲ್ಲ’ ಎಂದು ಭಾಸ್ಕರ ಬಡೆಕೊಟ್ಟು ಸುದ್ದಿಗಾರರಿಗೆ ತಿಳಿಸಿದರು.</p>.<p>ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಪ್ರಭಾವಿಯೊಬ್ಬರ ವಿರುದ್ಧ ಇವರು ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>