ಪುತ್ತೂರು (ದಕ್ಷಿಣ ಕನ್ನಡ): ‘ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಬಡವರು ಮನೆ, ಅನ್ನ, ಬಟ್ಟೆ, ಬೆಳಕು ಇಲ್ಲದೆ ಕೊರಗಬಾರದು. ಈ ನಿಟ್ಟಿನಲ್ಲಿ ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ನಿಂದ ಈಗಾಗಲೇ ನೋಂದಣಿಯಾಗಿರುವ 600 ಮಂದಿ ಬಡವರಿಗೆ ನಿವೇಶನ ನೀಡಲಾಗುವುದು. ಇದಕ್ಕಾಗಿ ವಿಟ್ಲ ಭಾಗದಲ್ಲಿ 5 ಎಕರೆ ಭೂಮಿ ಖರೀದಿ ಮಾಡಲಾಗಿದೆ’ ಎಂದು ಶಾಸಕ ಅಶೋಕ್ ಕುಮಾರ್ ಇಲ್ಲಿ ಹೇಳಿದರು.