<p><strong>ಮಂಗಳೂರು:</strong> ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಸಾಫ್ಟ್ವೇರ್ ಆವೃತ್ತಿ) 2024ರ ಅಂತಿಮ ಸ್ಪರ್ಧೆಯು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಡಿ.11 ಮತ್ತು 12ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಇಂಜಗನೇರಿ ಹೇಳಿದರು.</p>.<p>ಶಿಕ್ಷಣ ಸಚಿವಾಲಯ ಮತ್ತು ಎಐಸಿಟಿಇ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. 2017ರಿಂದ ಕೇಂದ್ರ ಸರ್ಕಾರ ಈ ಕಾರ್ಯಕ್ರಮ ನಡೆಸುತ್ತಿದೆ ಎಂದು ಅವರು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಪಠ್ಯದಾಚೆಗಿನ ಕ್ರಿಯಾಶೀಲತೆ, ಕ್ಲಿಷ್ಟಕರ ಸಮಸ್ಯೆ ಬಗೆಹರಿಸುವ ಕೌಶಲ, ಸಾಮಾಜಿಕ ಸವಾಲುಗಳನ್ನು ಎದುರಿಸುವ ಮೂಲಕ ವಿದ್ಯಾರ್ಥಿಗಳ ಸಾಮರ್ಥ್ಯ ಓರೆಗೆ ಹಚ್ಚುವ ಕಾರ್ಯಕ್ರಮ ಇದಾಗಿದೆ. ಈ ವರ್ಷ ಐದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ ಈ ಎರಡು ವಿಭಾಗಗಳಲ್ಲಿ ನಡೆಯುವ ಗ್ರ್ಯಾಂಡ್ ಫಿನಾಲೆಯು ದೇಶದ 51 ಸ್ಥಳಗಳಲ್ಲಿ ನಡೆಯುತ್ತದೆ. ಕರ್ನಾಟಕದ ಒಂಬತ್ತು ಕೇಂದ್ರಗಳಲ್ಲಿ ಸಹ್ಯಾದ್ರಿ ಕಾಲೇಜು ಒಂದಾಗಿದೆ. 30 ತಂಡಗಳು ಭಾಗವಹಿಸಲಿದ್ದು, ಪ್ರತಿ ತಂಡದಲ್ಲಿ ಆರು ವಿದ್ಯಾರ್ಥಿಗಳಂತೆ ಒಟ್ಟು 180 ಮಂದಿ ಭಾಗವಹಿಸುವರು ಎಂದರು.</p>.<p>ಡಿ.11ರ ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಭಾರತೀಯ ಏರೊಸ್ಪೇಸ್ ವಿಜ್ಞಾನಿ ಬಿ.ಎನ್. ಸುರೇಶ್, ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಳ್ಳುವರು ಎಂದರು.</p>.<p>ಕಾಲೇಜಿನ ದುಡ್ಡೇಲ ಸಾಯಿ ಪ್ರಶಾಂತ್, ಶ್ಯಾಮಲ್ ಕಿಶನ್, ಸುಧೀರ್ ಶೆಟ್ಟಿ, ಮಂಜಪ್ಪ ಸಾರಥಿ, ಅಜಿತ್ ಬಿ.ಎಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಸಾಫ್ಟ್ವೇರ್ ಆವೃತ್ತಿ) 2024ರ ಅಂತಿಮ ಸ್ಪರ್ಧೆಯು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಡಿ.11 ಮತ್ತು 12ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಇಂಜಗನೇರಿ ಹೇಳಿದರು.</p>.<p>ಶಿಕ್ಷಣ ಸಚಿವಾಲಯ ಮತ್ತು ಎಐಸಿಟಿಇ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. 2017ರಿಂದ ಕೇಂದ್ರ ಸರ್ಕಾರ ಈ ಕಾರ್ಯಕ್ರಮ ನಡೆಸುತ್ತಿದೆ ಎಂದು ಅವರು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಪಠ್ಯದಾಚೆಗಿನ ಕ್ರಿಯಾಶೀಲತೆ, ಕ್ಲಿಷ್ಟಕರ ಸಮಸ್ಯೆ ಬಗೆಹರಿಸುವ ಕೌಶಲ, ಸಾಮಾಜಿಕ ಸವಾಲುಗಳನ್ನು ಎದುರಿಸುವ ಮೂಲಕ ವಿದ್ಯಾರ್ಥಿಗಳ ಸಾಮರ್ಥ್ಯ ಓರೆಗೆ ಹಚ್ಚುವ ಕಾರ್ಯಕ್ರಮ ಇದಾಗಿದೆ. ಈ ವರ್ಷ ಐದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ ಈ ಎರಡು ವಿಭಾಗಗಳಲ್ಲಿ ನಡೆಯುವ ಗ್ರ್ಯಾಂಡ್ ಫಿನಾಲೆಯು ದೇಶದ 51 ಸ್ಥಳಗಳಲ್ಲಿ ನಡೆಯುತ್ತದೆ. ಕರ್ನಾಟಕದ ಒಂಬತ್ತು ಕೇಂದ್ರಗಳಲ್ಲಿ ಸಹ್ಯಾದ್ರಿ ಕಾಲೇಜು ಒಂದಾಗಿದೆ. 30 ತಂಡಗಳು ಭಾಗವಹಿಸಲಿದ್ದು, ಪ್ರತಿ ತಂಡದಲ್ಲಿ ಆರು ವಿದ್ಯಾರ್ಥಿಗಳಂತೆ ಒಟ್ಟು 180 ಮಂದಿ ಭಾಗವಹಿಸುವರು ಎಂದರು.</p>.<p>ಡಿ.11ರ ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಭಾರತೀಯ ಏರೊಸ್ಪೇಸ್ ವಿಜ್ಞಾನಿ ಬಿ.ಎನ್. ಸುರೇಶ್, ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಳ್ಳುವರು ಎಂದರು.</p>.<p>ಕಾಲೇಜಿನ ದುಡ್ಡೇಲ ಸಾಯಿ ಪ್ರಶಾಂತ್, ಶ್ಯಾಮಲ್ ಕಿಶನ್, ಸುಧೀರ್ ಶೆಟ್ಟಿ, ಮಂಜಪ್ಪ ಸಾರಥಿ, ಅಜಿತ್ ಬಿ.ಎಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>