<p><strong>ಕಾಸರಗೋಡು</strong>: ಚೆರುವತ್ತೂರು ಮಟ್ಟಲಾಯಿ ಎಂಬಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಗುಡ್ಡದಿಂದ ಮಣ್ಣು ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.</p>.<p>ಮೃತರ ಮತ್ತು ಗಾಯಗೊಂಡವರ ಮಾಹಿತಿ ಲಭಿಸಿಲ್ಲ. ಬೇರೆ ರಾಜ್ಯದ ಕಾರ್ಮಿಕರು ಎಂದು ಪೊಲೀಸರು ಅಂದಾಜಿಸಿದ್ದಾರೆ.</p>.<p>ಸಾರ್ವಜನಿಕರ ಸಹಾಯದೊಂದಿಗೆ ಅಗ್ನಿಶಾಮಕದಳದ ಸಿಬ್ಬಂದಿ ಮಣ್ಣಿನಡಿ ಸಿಲುಕಿದ್ದ ಮೂವರನ್ನು ಮೇಲೆತ್ತಿದೆ. ಅಷ್ಟರಲ್ಲಿ ಒಬ್ಬರು ಮೃತಪಟ್ಟಿದ್ದರು. ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ರಸ್ತೆ ನಿರ್ಮಾಣಕ್ಕಾಗಿ ಗುಡ್ಡದ ಒಂದು ಬದಿಯಿಂದ ಮಣ್ಣು ತೆರವುಗೊಳಿಸುತ್ತಿದ್ದಾಗ ಗುಡ್ಡದಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿತ್ತು. ಕಾಞಂಗಾಡು ಡಿವೈಎಸ್ಪಿ ಬಾಬು ಪೆರಿಂಙೋಂ ಅವರ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ಮೇಘಾ ಕನ್ಸ್ಟ್ರಕ್ಷನ್ ಸಂಸ್ಥೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಿರ್ವಹಿಸುತ್ತಿದೆ.</p>.<p>ಕಟ್ಟಡದಿಂದ ಬಿದ್ದು ಸಾವು</p>.<p>ಕಾಸರಗೋಡು: ನಿರ್ಮಾಣಗೊಳ್ಳುತ್ತಿದ್ದ ಮನೆಯ ಮೊದಲ ಅಂತಸ್ತಿನಿಂದ ಬಿದ್ದು, ಮೇಸ್ತ್ರಿ ಮೃತಪಟ್ಟಿದ್ದಾರೆ. ಚಿನ್ನಮೊಗರು ಎಂಬಲ್ಲಿ ಘಟನೆ ನಡೆದಿದ್ದು, ಜೋಡುಕಲ್ಲು ನಿವಾಸಿ ಶಶಿಧರ (32) ಮೃತಪಟ್ಟವರು.</p>.<p>ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಅವರಿಗೆ ಪತ್ನಿ ಇದ್ದಾರೆ.</p>.<p>ಎಂಡಿಎಂಎ, ಗಾಂಜಾ ಪತ್ತೆ</p>.<p>ಕಾಸರಗೋಡು: ಶಿರಿಯ ಒಳಯಂ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 12.087 ಗ್ರಾಂ ಎಂಡಿಎಂಎಯನ್ನು ಅಬಕಾರಿ ದಳ ಪತ್ತೆಮಾಡಿದೆ.</p>.<p>ಇನ್ನೊಂದು ಪ್ರಕರಣದಲ್ಲಿ ಕುಂಬಳೆ ಬದ್ರಿಯಾನಗರದಲ್ಲಿ 10 ಗ್ರಾಂ ಗಾಂಜಾ ಸಹಿತ ಸ್ಥಳೀಯ ನೀರಾಳಿ ನಿವಾಸಿ ಅಫ್ಝಲ್ (28) ಎಂಬಾತನನ್ನು ಅಬಕಾರಿ ದಳ ಬಂಧಿಸಿದೆ.</p>.<p>ಆತ್ಮಹತ್ಯೆ</p>.<p>ಕಾಸರಗೋಡು: ಬೋವಿಕ್ಕಾನ ತೇಜಸ್ ಹೌಸಿಂಗ್ ಕಾಲೊಮಿ ನಿವಾಸಿ ಚೋಮು (80) ಎಂಬುವರು ಮನೆ ಬಳಿಯ ಮಾವಿನಮರದ ಗೆಲ್ಲಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇನ್ನೊಂದು ಘಟನೆಯಲ್ಲಿ ಕಾರಡ್ಕ ಶಾಂತಿನಗರ ನಿವಾಸಿ ಸಿ.ಎಚ್.ಶಶಿ (58) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಸಿಪಿಎಂ ಶಾಖಾ ಕಾರ್ಯದರ್ಶಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು</strong>: ಚೆರುವತ್ತೂರು ಮಟ್ಟಲಾಯಿ ಎಂಬಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಗುಡ್ಡದಿಂದ ಮಣ್ಣು ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.</p>.<p>ಮೃತರ ಮತ್ತು ಗಾಯಗೊಂಡವರ ಮಾಹಿತಿ ಲಭಿಸಿಲ್ಲ. ಬೇರೆ ರಾಜ್ಯದ ಕಾರ್ಮಿಕರು ಎಂದು ಪೊಲೀಸರು ಅಂದಾಜಿಸಿದ್ದಾರೆ.</p>.<p>ಸಾರ್ವಜನಿಕರ ಸಹಾಯದೊಂದಿಗೆ ಅಗ್ನಿಶಾಮಕದಳದ ಸಿಬ್ಬಂದಿ ಮಣ್ಣಿನಡಿ ಸಿಲುಕಿದ್ದ ಮೂವರನ್ನು ಮೇಲೆತ್ತಿದೆ. ಅಷ್ಟರಲ್ಲಿ ಒಬ್ಬರು ಮೃತಪಟ್ಟಿದ್ದರು. ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ರಸ್ತೆ ನಿರ್ಮಾಣಕ್ಕಾಗಿ ಗುಡ್ಡದ ಒಂದು ಬದಿಯಿಂದ ಮಣ್ಣು ತೆರವುಗೊಳಿಸುತ್ತಿದ್ದಾಗ ಗುಡ್ಡದಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿತ್ತು. ಕಾಞಂಗಾಡು ಡಿವೈಎಸ್ಪಿ ಬಾಬು ಪೆರಿಂಙೋಂ ಅವರ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ಮೇಘಾ ಕನ್ಸ್ಟ್ರಕ್ಷನ್ ಸಂಸ್ಥೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಿರ್ವಹಿಸುತ್ತಿದೆ.</p>.<p>ಕಟ್ಟಡದಿಂದ ಬಿದ್ದು ಸಾವು</p>.<p>ಕಾಸರಗೋಡು: ನಿರ್ಮಾಣಗೊಳ್ಳುತ್ತಿದ್ದ ಮನೆಯ ಮೊದಲ ಅಂತಸ್ತಿನಿಂದ ಬಿದ್ದು, ಮೇಸ್ತ್ರಿ ಮೃತಪಟ್ಟಿದ್ದಾರೆ. ಚಿನ್ನಮೊಗರು ಎಂಬಲ್ಲಿ ಘಟನೆ ನಡೆದಿದ್ದು, ಜೋಡುಕಲ್ಲು ನಿವಾಸಿ ಶಶಿಧರ (32) ಮೃತಪಟ್ಟವರು.</p>.<p>ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಅವರಿಗೆ ಪತ್ನಿ ಇದ್ದಾರೆ.</p>.<p>ಎಂಡಿಎಂಎ, ಗಾಂಜಾ ಪತ್ತೆ</p>.<p>ಕಾಸರಗೋಡು: ಶಿರಿಯ ಒಳಯಂ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 12.087 ಗ್ರಾಂ ಎಂಡಿಎಂಎಯನ್ನು ಅಬಕಾರಿ ದಳ ಪತ್ತೆಮಾಡಿದೆ.</p>.<p>ಇನ್ನೊಂದು ಪ್ರಕರಣದಲ್ಲಿ ಕುಂಬಳೆ ಬದ್ರಿಯಾನಗರದಲ್ಲಿ 10 ಗ್ರಾಂ ಗಾಂಜಾ ಸಹಿತ ಸ್ಥಳೀಯ ನೀರಾಳಿ ನಿವಾಸಿ ಅಫ್ಝಲ್ (28) ಎಂಬಾತನನ್ನು ಅಬಕಾರಿ ದಳ ಬಂಧಿಸಿದೆ.</p>.<p>ಆತ್ಮಹತ್ಯೆ</p>.<p>ಕಾಸರಗೋಡು: ಬೋವಿಕ್ಕಾನ ತೇಜಸ್ ಹೌಸಿಂಗ್ ಕಾಲೊಮಿ ನಿವಾಸಿ ಚೋಮು (80) ಎಂಬುವರು ಮನೆ ಬಳಿಯ ಮಾವಿನಮರದ ಗೆಲ್ಲಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇನ್ನೊಂದು ಘಟನೆಯಲ್ಲಿ ಕಾರಡ್ಕ ಶಾಂತಿನಗರ ನಿವಾಸಿ ಸಿ.ಎಚ್.ಶಶಿ (58) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಸಿಪಿಎಂ ಶಾಖಾ ಕಾರ್ಯದರ್ಶಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>