ಆ ಬಳಿಕವೂ ಸಾಮಾಜಿಕ ಜಾಲತಾಣಗಳಲ್ಲಿ ಹೆಗ್ಗಡೆ ವಿರುದ್ಧ ನಾಯಕ್ ಆರೋಪಗಳನ್ನು ಮಾಡಿದ್ದರು. ಈ ಬಗ್ಗೆ ಹೆಗ್ಗಡೆಯವರು ನೀಡಿದ್ದ ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಸೋಮನಾಥ ನಾಯಕ್ ದೋಷಿ ಎಂದು ಪರಿಗಣಿಸಿ, ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ದೂರುದಾರರಿಗೆ ₹ 4.5 ಲಕ್ಷ ಪರಿಹಾರ ನೀಡಬೇಕು. ಇದಕ್ಕಾಗಿ ಆಸ್ತಿಯನ್ನೂ ಮುಟ್ಟುಗೋಲು ಹಾಕಬಹುದು ಎಂದು ಆದೇಶಿಸಿತ್ತು.