ಮಂಗಳೂರು: ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್ ಬುಧವಾರ ಮಂಗಳೂರಿಗೆ ಭೇಟಿ ನೀಡಿದ್ದಾರೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ ಡಾ. ಹಿಲ್ದಾ ರಾಯಪ್ಪನ್ ಸ್ವಾಗತಿಸಿದರು. ಸ್ಥಳೀಯ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಸೋನು ಸೂದ್ ಅವರು ದೇಶದ ವಿವಿಧ ಭಾಗಗಳಿಗೆ ನೆರವಾದಂತೆ ಮಂಗಳೂರಿಗೂ ಸಹ ಆಮ್ಲಜನಕ ಸಿಲಿಂಡರ್ ಒದಗಿಸುವಲ್ಲಿ ಮುತುವರ್ಜಿ ವಹಿಸಿದ್ದರು.