ಶಂಕಿತ ಆರೋಪಿ, ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ ಸಂತೋಷ್ ರಾವ್ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಸಾರ್ವಜನಿಕರ ಕೈಗೆ ಸಿಕ್ಕಿದ್ದು, ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಆತನನ್ನು ಬಂಧಿಸಿದ್ದರು. ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಂತೋಷ್ ರಾವ್ ಸುಮಾರು ಆರು ಬಾರಿ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗದೆ, ತಲೆ ಮರೆಸಿಕೊಂಡಿದ್ದ.