ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಸಿಬಿಐ ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖವಾದ ಕೆಲವು ಅಂಶಗಳು ಸೌಜನ್ಯಾ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆದಿದೆ ಎಂಬ ಅನುಮಾನವನ್ನು ಬಲಗೊಳಿಸಿವೆ. ಈಗಾಗಲೆ ಮುಖ್ಯಮಂತ್ರಿ ಬಳಿ ಚರ್ಚಿಸಿದ್ದು, ನಾನು ಪ್ರಸ್ತಾಪ ಮಾಡಿದಂತೆ ತನಿಖೆ ನಡೆಸಿದರೆ ಆರೋಪಿಗಳು ಸಿಕ್ಕಿಕೊಳ್ಳುತ್ತಾರೆ. ಇನ್ನೆರಡು ದಿನಗಳಲ್ಲಿ ಗೃಹಸಚಿವರನ್ನೂ ಭೇಟಿಯಾಗಿ ಮನವರಿಕೆ ಮಾಡಲಾಗುವುದು. ಇದರ ಭಾಗವಾಗಿ ನ್ಯಾಯಕ್ಕೆ ಒತ್ತಾಯಿಸಿ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆ.28ರಂದು ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಚಲೋ ಬೆಳ್ತಂಗಡಿ ಮಹಾಧರಣಿ ನಡೆಸಲಿದ್ದೇವೆ' ಎಂದರು.