ಮಂಗಳೂರು: ಇಲ್ಲಿನ ಎಂಆರ್ಪಿಎಲ್ ಸಂಸ್ಥೆಯು ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಿಂದ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಮಕ್ಕಳ ಎರಡು ಶಾಲೆಗಳಿಗೆ ಒಟ್ಟು ₹45.41 ಲಕ್ಷ ಮೊತ್ತದ ಎರಡು ಶಾಲಾ ಬಸ್ಗಳನ್ನು ದೇಣಿಗೆಯಾಗಿ ನೀಡಿದೆ.
ಉಡುಪಿ ಜಿಲ್ಲೆಯ ಕಾರ್ಕಳದ ಚೇತನಾ ವಿಶೇಷ ಮಕ್ಕಳ ಶಾಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಗೆ ಬಸ್ಗಳನ್ನು ನೀಡಲಾಗಿದೆ. ಒಟ್ಟಾರೆ 165 ವಿದ್ಯಾರ್ಥಿಗಳು ಇದರ ಲಾಭ ಪಡೆಯಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.