ಸುಬ್ರಹ್ಮಣ್ಯ: ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿಪೂಜೆ ಪ್ರಯುಕ್ತ ಬುಧವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ವಿಶೇಷ ಪೂಜೆ ನೆರವೇರಿತು.
ದೇವರಿಗೆ ವಿಶೇಷ ಪಂಚಾಮೃತ ಮಹಾಭಿಷೇಕ ಮಾಡಲಾಯಿತು. ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮಹಾಪೂಜೆ ನಡೆಸಲಾಯಿತು.
ದೇವಳದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗದ ಕೆ.ಎಂ.ಗೋಪಿನಾಥ್ ನಂಬೀಶ, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಮೋನಪ್ಪ ಮಾನಾಡು,ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯ ಮತ್ತು ರಮೇಶ ಆಸ್ರಣ್ಣ ಇದ್ದರು.