<p><strong>ನವದೆಹಲಿ:</strong>ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಪ್ಪು ಮಾಡಿದ್ದ ಇಬ್ಬರು ಸ್ಪೈಸ್ಜೆಟ್ಪೈಲಟ್ಗಳ ಪರವಾನಗಿಯನ್ನು (ಲೈಸೆನ್ಸ್) ನಾಲ್ಕೂವರೆ ತಿಂಗಳ ಅವಧಿಗೆ ನಾಗರಿಕ ವಿಮಾನಯಾನ ನಿರ್ದೇಶಾಲಯದ (ಡಿಜಿಸಿಎ)ಪ್ರಧಾನ ನಿರ್ದೇಶಕರು ಅಮಾನತು ಮಾಡಿದ್ದಾರೆ.</p>.<p>ಲ್ಯಾಂಡಿಂಗ್ ವೇಳೆ ಮಾಡಿದ ತಪ್ಪಿನಿಂದವಿಮಾನ ನಿಲ್ದಾಣದರನ್ವೇಯಲ್ಲಿ ಎಡಕ್ಕೆ ಜಾರಿದ್ದ ವಿಮಾನವು ರನ್ವೇ ಅಂಚಿನ ದೀಪಗಳಿಗೆ ಹಾನಿ ಮಾಡಿತ್ತು. ಲೋಪದ ಬಗ್ಗೆ ತನಿಖೆ ನಡೆಸಿದ್ದ ನಿರ್ದೇಶನಾಲಯವು ಪೈಲಟ್ಗಳ ಲೋಪ ಸಾಬೀತಾದ ಕಾರಣ ಪರವಾನಗಿ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿತು ಎಂದು ಪ್ರಕಟಣೆ ತಿಳಿಸಿದೆ.</p>.<p>ಲೋಪಕ್ಕೆ ಸಂಬಂಧಿಸಿದಂತೆಪೈಲಟ್ ಇನ್ ಕಮಾಂಡ್ ಮತ್ತು ಫಸ್ಟ್ ಆಫೀಸರ್ಗಳು ನೀಡಿರುವ ಉತ್ತರವನ್ನುಡಿಜಿಸಿಎ ಒಪ್ಪಿಕೊಂಡಿಲ್ಲ. ಅವರಿಬ್ಬರಿಗೂ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪ್ರಕಟಣೆ ಹೇಳಿದೆ.</p>.<p>ವಿಮಾನವು ನೆಲವನ್ನು ಸ್ಪರ್ಶಿಸಿದ ರೀತಿ ಸರಿಯಿರಲಿಲ್ಲ. ರನ್ ವೇಯಿಂದ ಎಡಕ್ಕೆ ವಿಮಾನ ಜಾರಿತ್ತು. ಹೀಗಾಗಿ ರನ್ ವೇ ಅಂಚಿನ ದೀಪಗಳಿಗೆ ಹಾನಿಯಾಗಿತ್ತು ಎಂಬ ಸಂಗತಿ ತನಿಖೆಯಿಂದ ಬೆಳಕಿಗೆ ಬಂದಿತ್ತು.</p>.<p>ಮಂಗಳೂರಿನಲ್ಲಿ ಲ್ಯಾಂಡ್ ಆಗಿದ್ದ ಸ್ಪೈಸ್ಜೆಟ್ನ ಬೋಯಿಂಗ್ 737 ವಿಮಾನವು ದುಬೈನಿಂದ ಪ್ರಯಾಣ ಆರಂಭಿಸಿತ್ತು. ತಪ್ಪು ಮಾಡಿದ್ದಇಬ್ಬರೂ ಪೈಲಟ್ಗಳನ್ನೂ ಸ್ಪೈಸ್ಜೆಟ್ ಅಮಾನತು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಪ್ಪು ಮಾಡಿದ್ದ ಇಬ್ಬರು ಸ್ಪೈಸ್ಜೆಟ್ಪೈಲಟ್ಗಳ ಪರವಾನಗಿಯನ್ನು (ಲೈಸೆನ್ಸ್) ನಾಲ್ಕೂವರೆ ತಿಂಗಳ ಅವಧಿಗೆ ನಾಗರಿಕ ವಿಮಾನಯಾನ ನಿರ್ದೇಶಾಲಯದ (ಡಿಜಿಸಿಎ)ಪ್ರಧಾನ ನಿರ್ದೇಶಕರು ಅಮಾನತು ಮಾಡಿದ್ದಾರೆ.</p>.<p>ಲ್ಯಾಂಡಿಂಗ್ ವೇಳೆ ಮಾಡಿದ ತಪ್ಪಿನಿಂದವಿಮಾನ ನಿಲ್ದಾಣದರನ್ವೇಯಲ್ಲಿ ಎಡಕ್ಕೆ ಜಾರಿದ್ದ ವಿಮಾನವು ರನ್ವೇ ಅಂಚಿನ ದೀಪಗಳಿಗೆ ಹಾನಿ ಮಾಡಿತ್ತು. ಲೋಪದ ಬಗ್ಗೆ ತನಿಖೆ ನಡೆಸಿದ್ದ ನಿರ್ದೇಶನಾಲಯವು ಪೈಲಟ್ಗಳ ಲೋಪ ಸಾಬೀತಾದ ಕಾರಣ ಪರವಾನಗಿ ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿತು ಎಂದು ಪ್ರಕಟಣೆ ತಿಳಿಸಿದೆ.</p>.<p>ಲೋಪಕ್ಕೆ ಸಂಬಂಧಿಸಿದಂತೆಪೈಲಟ್ ಇನ್ ಕಮಾಂಡ್ ಮತ್ತು ಫಸ್ಟ್ ಆಫೀಸರ್ಗಳು ನೀಡಿರುವ ಉತ್ತರವನ್ನುಡಿಜಿಸಿಎ ಒಪ್ಪಿಕೊಂಡಿಲ್ಲ. ಅವರಿಬ್ಬರಿಗೂ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪ್ರಕಟಣೆ ಹೇಳಿದೆ.</p>.<p>ವಿಮಾನವು ನೆಲವನ್ನು ಸ್ಪರ್ಶಿಸಿದ ರೀತಿ ಸರಿಯಿರಲಿಲ್ಲ. ರನ್ ವೇಯಿಂದ ಎಡಕ್ಕೆ ವಿಮಾನ ಜಾರಿತ್ತು. ಹೀಗಾಗಿ ರನ್ ವೇ ಅಂಚಿನ ದೀಪಗಳಿಗೆ ಹಾನಿಯಾಗಿತ್ತು ಎಂಬ ಸಂಗತಿ ತನಿಖೆಯಿಂದ ಬೆಳಕಿಗೆ ಬಂದಿತ್ತು.</p>.<p>ಮಂಗಳೂರಿನಲ್ಲಿ ಲ್ಯಾಂಡ್ ಆಗಿದ್ದ ಸ್ಪೈಸ್ಜೆಟ್ನ ಬೋಯಿಂಗ್ 737 ವಿಮಾನವು ದುಬೈನಿಂದ ಪ್ರಯಾಣ ಆರಂಭಿಸಿತ್ತು. ತಪ್ಪು ಮಾಡಿದ್ದಇಬ್ಬರೂ ಪೈಲಟ್ಗಳನ್ನೂ ಸ್ಪೈಸ್ಜೆಟ್ ಅಮಾನತು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>