ಮಂಗಳೂರು: ‘ಗಣಿತ ಪ್ರಾಧ್ಯಾಪಕರಾಗಿದ್ದ ಡಾ. ಎಸ್.ಆರ್. ರಂಗನಾಥನ್, ಭಾರತದ ಗ್ರಂಥಾಲಯಗಳನ್ನು ಬದಲಿಸಬೇಕೆಂದು ಪಣತೊಟ್ಟು 20 ವರ್ಷಗಳ ಕಾಲ ರಜೆಯಿಲ್ಲದೆ, ವಾರದ ಏಳೂ ದಿನ, ದಿನಕ್ಕೆ 13 ಗಂಟೆ ದುಡಿದು, ಗ್ರಂಥಾಲಯ ವಿಜ್ಞಾನದ ಪಿತಾಮಹ ಎನಿಸಿಕೊಂಡಿದ್ದು ಕಡಿಮೆ ಸಾಧನೆಯಲ್ಲ’ ಎಂದು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ. ವಿ.ಜಿ. ತಳವಾರ್ ಅಭಿಪ್ರಾಯಪಟ್ಟರು.