<p><strong>ಬಜಪೆ:</strong> ‘ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ರೈತರ ಪರ ಎಂದು ಭಾಷಣದಲ್ಲಿ ಹೇಳುತ್ತಿದ್ದಾರೆ. ಆದರೆ, 440 ಕೆ.ವಿ. ವಿದ್ಯುತ್ ಮಾರ್ಗವನ್ನು ತಡೆಯುತ್ತಿಲ್ಲ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ ಶೆಟ್ಟಿ ಬೈಲಗುತ್ತು ಆರೋಪಿಸಿದರು.</p>.<p>ಪಡುಬಿದ್ರಿಯಿಂದ ಕಾಸರಗೋಡಿಗೆ ವಿದ್ಯುತ್ ಸರಬರಾಜು ಮಾಡುವ ಉದ್ದೇಶಿತ 440 ಕೆ.ವಿ. ಸಾಮಾರ್ಥ್ಯದ ವಿದ್ಯುತ್ ಮಾರ್ಗದ ವಿರುದ್ಧ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ಗುರುವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಏಳಿಂಜೆ ಹೋರಾಟ ಸಮಿತಿಯ ಸುಕೇಶ್ಚಂದ್ರ ಮಾತನಾಡಿ, ಒಗ್ಗಟ್ಟಾಗಿ ಹೋರಾಟ ಮಾಡಿದರೆ ವಿದ್ಯುತ್ ಮಾರ್ಗವನ್ನು ತಡೆಯಲು ಸಾಧ್ಯವಿದೆ ಎಂದರು.</p>.<p>ಇನ್ನಾ ಹೋರಾಟ ಸಮಿತಿಯ ಚಂದ್ರಶೇಖರ ಶೆಟ್ಟಿ, ವಿಟ್ಲ ಹೋರಾಟ ಸಮಿತಿಯ ರಾಜೀವ ಗೌಡ, ರೈತ ಸಂಘದ ಬಂಟ್ವಾಳ ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ರೈತ ಸಂಘದ ಸಲಹೆಗಾರ ಮುರುವ ಮಹಾಬಲ ಭಟ್ ಮಾತನಾಡಿದರು.</p>.<p>ಸ್ಥಳಕ್ಕೆ ಬಂದ ಕುಪ್ಪೆಪದವು ಪಿಡಿಒ ಸವಿತಾ ಮಂದೊಲಿಕರ್, ಮುತ್ತೂರು ಪಿಡಿಒ ಪ್ರಮೋದ್ ನಾಯ್ಕ್ ಮನವಿ ಪತ್ರಗಳನ್ನು ಜಿಲ್ಲಾಧಿಕಾರಿಗಳಿಗೆ ತಲುಪಸಿಲಾಗುವುದು ಎಂದು ತಿಳಿಸಿದರು.</p>.<p>ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಸಿರು ಸೇನೆಯ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ದಯಾನಂದ ಶೆಟ್ಟಿ ಕುಳವೂರು ಸ್ವಾಗತಿಸಿ, ಹಸಿರು ಸೇನೆಯ ಸಂಚಾಲಕ ಶೇಖ್ ಅಬ್ದುಲ್ಲಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಜಪೆ:</strong> ‘ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ರೈತರ ಪರ ಎಂದು ಭಾಷಣದಲ್ಲಿ ಹೇಳುತ್ತಿದ್ದಾರೆ. ಆದರೆ, 440 ಕೆ.ವಿ. ವಿದ್ಯುತ್ ಮಾರ್ಗವನ್ನು ತಡೆಯುತ್ತಿಲ್ಲ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ ಶೆಟ್ಟಿ ಬೈಲಗುತ್ತು ಆರೋಪಿಸಿದರು.</p>.<p>ಪಡುಬಿದ್ರಿಯಿಂದ ಕಾಸರಗೋಡಿಗೆ ವಿದ್ಯುತ್ ಸರಬರಾಜು ಮಾಡುವ ಉದ್ದೇಶಿತ 440 ಕೆ.ವಿ. ಸಾಮಾರ್ಥ್ಯದ ವಿದ್ಯುತ್ ಮಾರ್ಗದ ವಿರುದ್ಧ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ಗುರುವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಏಳಿಂಜೆ ಹೋರಾಟ ಸಮಿತಿಯ ಸುಕೇಶ್ಚಂದ್ರ ಮಾತನಾಡಿ, ಒಗ್ಗಟ್ಟಾಗಿ ಹೋರಾಟ ಮಾಡಿದರೆ ವಿದ್ಯುತ್ ಮಾರ್ಗವನ್ನು ತಡೆಯಲು ಸಾಧ್ಯವಿದೆ ಎಂದರು.</p>.<p>ಇನ್ನಾ ಹೋರಾಟ ಸಮಿತಿಯ ಚಂದ್ರಶೇಖರ ಶೆಟ್ಟಿ, ವಿಟ್ಲ ಹೋರಾಟ ಸಮಿತಿಯ ರಾಜೀವ ಗೌಡ, ರೈತ ಸಂಘದ ಬಂಟ್ವಾಳ ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ರೈತ ಸಂಘದ ಸಲಹೆಗಾರ ಮುರುವ ಮಹಾಬಲ ಭಟ್ ಮಾತನಾಡಿದರು.</p>.<p>ಸ್ಥಳಕ್ಕೆ ಬಂದ ಕುಪ್ಪೆಪದವು ಪಿಡಿಒ ಸವಿತಾ ಮಂದೊಲಿಕರ್, ಮುತ್ತೂರು ಪಿಡಿಒ ಪ್ರಮೋದ್ ನಾಯ್ಕ್ ಮನವಿ ಪತ್ರಗಳನ್ನು ಜಿಲ್ಲಾಧಿಕಾರಿಗಳಿಗೆ ತಲುಪಸಿಲಾಗುವುದು ಎಂದು ತಿಳಿಸಿದರು.</p>.<p>ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಸಿರು ಸೇನೆಯ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ದಯಾನಂದ ಶೆಟ್ಟಿ ಕುಳವೂರು ಸ್ವಾಗತಿಸಿ, ಹಸಿರು ಸೇನೆಯ ಸಂಚಾಲಕ ಶೇಖ್ ಅಬ್ದುಲ್ಲಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>