<p><strong>ಮಂಗಳೂರು:</strong> ಮುಕ್ಕದಲ್ಲಿರುವ ಶ್ರೀನಿವಾಸ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಆಯೋಜಿಸಿರುವ ರಾಷ್ಟ್ರಮಟ್ಟದ ಸಾಂಸ್ಕೃತಿಕ, ಕ್ರೀಡಾ ಮತ್ತು ತಾಂತ್ರಿಕ ಹಬ್ಬ ‘ಟೆಕ್ ಯುವ’ ಇದೇ 26 ಮತ್ತು 27ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಡೀನ್ ಥಾಮಸ್ ಪಿಂಟೊ, ಕರ್ನಾಟಕ, ಗೋವಾ ಮತ್ತು ತಮಿಳುನಾಡಿನ 40 ಎಂಜಿನಿಯರಿಂಗ್ ಕಾಲೇಜುಗಳಿಂದ 3500ಕ್ಕೂ ಅಧಿಕ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.</p>.<p>ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಎಥ್ನೊಟೆಕ್ ಅಕಾಡೆಮಿಕ್ ಸೊಲ್ಯೂಷನ್ಸ್ನ ಸಿಇಒ ಕಿರಣ್ ಕೆ.ರಾಜಣ್ಣ ಮಂಗಳೂರಿನ ನೋವಿಗೊ ಸೊಲ್ಯೂಷನ್ಸ್ನ ಸಿಇಒ ಪ್ರವೀಣ ಕಲ್ಭಾವಿ ಪಾಲ್ಗೊಳ್ಳುವರು ಎಂದು ಅವರು ತಿಳಿಸಿದರು.</p>.<p>ಟೆಕ್ ಯುವ ಸಂಚಾಲಕ ಶ್ರೀನಾಥ್ ರಾವ್ ಮಾತನಾಡಿ ಕೃತಕ ಬುದ್ದಿಮತ್ತೆ (ಎಐ), ಬೈನಲ್ ಬ್ಯಾಟಲ್, ತಾಂತ್ರಿಕ ಮಾತುಕತೆ ಮುಂತಾದ ಬಗೆಬಗೆಯ ಸ್ಪರ್ಧೆಗಳು ಮೊದಲ ದಿನ ನಡೆಯಲಿದ್ದು ಸಾಂಸ್ಕೃತಿಕ ಚಟುವಟಿಕೆ ಎರಡನೇ ದಿನ ನಡೆಯಲಿದೆ. ಎರಡೂ ದಿನ ಕ್ರೀಡಾ ಸ್ಪರ್ಧೆಗಳು ಇರುತ್ತವೆ ಎಂದರು.</p>.<p>28ರಂದು ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಮಾತ್ರ ‘ಕಲಾಸ್ಪಂದನ’ ಕಾರ್ಯಕ್ರಮ ಆಯೋಜಿಸಲಾಗಿದ್ದು ಭರತನಾಟ್ಯ ಕಲಾವಿದ ಶ್ರೀಧರ್ ಹೊಳ್ಳ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಪತಿ ಎ.ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸುವರು ಎಂದು ಅವರು ವಿವರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮುಕ್ಕದಲ್ಲಿರುವ ಶ್ರೀನಿವಾಸ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಆಯೋಜಿಸಿರುವ ರಾಷ್ಟ್ರಮಟ್ಟದ ಸಾಂಸ್ಕೃತಿಕ, ಕ್ರೀಡಾ ಮತ್ತು ತಾಂತ್ರಿಕ ಹಬ್ಬ ‘ಟೆಕ್ ಯುವ’ ಇದೇ 26 ಮತ್ತು 27ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಡೀನ್ ಥಾಮಸ್ ಪಿಂಟೊ, ಕರ್ನಾಟಕ, ಗೋವಾ ಮತ್ತು ತಮಿಳುನಾಡಿನ 40 ಎಂಜಿನಿಯರಿಂಗ್ ಕಾಲೇಜುಗಳಿಂದ 3500ಕ್ಕೂ ಅಧಿಕ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.</p>.<p>ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಎಥ್ನೊಟೆಕ್ ಅಕಾಡೆಮಿಕ್ ಸೊಲ್ಯೂಷನ್ಸ್ನ ಸಿಇಒ ಕಿರಣ್ ಕೆ.ರಾಜಣ್ಣ ಮಂಗಳೂರಿನ ನೋವಿಗೊ ಸೊಲ್ಯೂಷನ್ಸ್ನ ಸಿಇಒ ಪ್ರವೀಣ ಕಲ್ಭಾವಿ ಪಾಲ್ಗೊಳ್ಳುವರು ಎಂದು ಅವರು ತಿಳಿಸಿದರು.</p>.<p>ಟೆಕ್ ಯುವ ಸಂಚಾಲಕ ಶ್ರೀನಾಥ್ ರಾವ್ ಮಾತನಾಡಿ ಕೃತಕ ಬುದ್ದಿಮತ್ತೆ (ಎಐ), ಬೈನಲ್ ಬ್ಯಾಟಲ್, ತಾಂತ್ರಿಕ ಮಾತುಕತೆ ಮುಂತಾದ ಬಗೆಬಗೆಯ ಸ್ಪರ್ಧೆಗಳು ಮೊದಲ ದಿನ ನಡೆಯಲಿದ್ದು ಸಾಂಸ್ಕೃತಿಕ ಚಟುವಟಿಕೆ ಎರಡನೇ ದಿನ ನಡೆಯಲಿದೆ. ಎರಡೂ ದಿನ ಕ್ರೀಡಾ ಸ್ಪರ್ಧೆಗಳು ಇರುತ್ತವೆ ಎಂದರು.</p>.<p>28ರಂದು ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಮಾತ್ರ ‘ಕಲಾಸ್ಪಂದನ’ ಕಾರ್ಯಕ್ರಮ ಆಯೋಜಿಸಲಾಗಿದ್ದು ಭರತನಾಟ್ಯ ಕಲಾವಿದ ಶ್ರೀಧರ್ ಹೊಳ್ಳ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಪತಿ ಎ.ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸುವರು ಎಂದು ಅವರು ವಿವರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>