ಸುರತ್ಕಲ್: ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ವಿರೋಧಿಸಿ, ಶ್ರೀರಾಮ ಸೇನೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
'ರಾಜ್ಯ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ', 'ಬಿಜೆಪಿ ರಾಜ್ಯಾಧ್ಯಕ್ಷರಿಗೆ ಧಿಕ್ಕಾರ', 'ಹಿಂದೂ ವಿರೋಧಿ ಸರ್ಕಾರಕ್ಕೆ ಧಿಕ್ಕಾರ' ಎಂದು ಘೋಷಣೆ ಕೂಗಿದರು.
ಪ್ರಮೋದ್ ಮುತಾಲಿಕ್ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರಿಂದ, ಅವರನ್ನು ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದ್ದರು.