ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಆಗಿಲ್ಲ. ಪರೀಕ್ಷೆಗೂ ಅಡ್ಡಿಯಾಗಿಲ್ಲ. ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ ಎಂದು ಹೇಳಿದರು.
ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಮಂಗಳೂರು ನಗರದ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಸೋಮವಾರ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ಡಿಡಿಪಿಐ ಮಲ್ಲೆಸ್ವಾಮಿ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತರಬೇಕು, ಕೇರಳದಿಂದ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಿರುವುದನ್ನು ಖಾತ್ರಿ ಪಡಿಸಿಕೊಂಡರು. ಈ ಸಂದರ್ಭದಲ್ಲಿ ಸಂಬಂಧಿಸಿದ ಶಾಲೆಯ ಸಿಬ್ಬಂದಿ ಇದ್ದರು.