ಮಕ್ಕಳು ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮತ್ತು ಮನೆ ಹಿಂತಿರುಗುವ ಸಂದರ್ಭದಲ್ಲಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಬೇಕು. ಎಲ್ಲ ಮಾರ್ಗಗಳಲ್ಲಿ ಬಸ್ ಓಡಿಸುವ ಜತೆಗೆ ಕುಂಟಾರು, ಮೇನಾಲ, ಪಾಣಾಜೆ ಮೊದಲಾದ ಗಡಿ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದರು.