‘ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಖುದ್ದಾಗಿ ಮಕ್ಕಳ ಮನೆಗಳಿಗೆ ಭೇಟಿ ನೀಡಲಿದ್ದು, ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಹಿಂದೇಟು ಹಾಕುತ್ತಿರುವುದು ಏಕೆ ಎನ್ನುವ ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ. ಈ ಮಾಹಿತಿಯಿಂದ ಶಿಕ್ಷಣ ಇಲಾಖೆಗೂ ಅನುಕೂಲ ಆಗಲಿದೆ’ ಎಂದು ತಿಳಿಸಿದ್ದಾರೆ.