<p><strong>ಮಂಗಳೂರು:</strong> ‘ಕಲೆಯನ್ನು ಎಲ್ಲರೂ ಸೇರಿ ಸಂಭ್ರಮಿಸಬೇಕು. ಕಲೆಯ ಬಗ್ಗೆ ಯುವ ಮನಸ್ಸುಗಳಲ್ಲಿ ಅಭಿರುಚಿ, ನಂಬಿಕೆ, ಗ್ರಹಿಕೆಯನ್ನು ಬೆಳೆಸುವುದು ಮುಖ್ಯ’ ಎಂದು ಸಿನಿಮಾ ನಟ ಪ್ರಕಾಶ್ ರಾಜ್ ಹೇಳಿದರು.</p>.<p>ಇಲ್ಲಿನ ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಪ್ರಾಂಗಣದಲ್ಲಿ ನಾಲ್ಕು ದಿನ ನಡೆಯಲಿರುವ 'ಬಿಯಾಂಡ್ ದಿ ಸ್ಕೋರ್ - ರಿದಂ' ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕಾಲೇಜು ದಿನಗಳಲ್ಲಿ ಕನ್ನಡ ಅಧ್ಯಾಪಕರು ಪಾಠದ ಜೊತೆ ಪದ್ಯವನ್ನು ವಿಮರ್ಶಿಸುವುದು ಹೇಗೆಂಬುದನ್ನು ಕಲಿಸಿದ್ದರು. ನಾನು ಸಾಹಿತ್ಯದ ಆಸಕ್ತಿ ಬೆಳೆಸಿಕೊಳ್ಳಲು ಇದು ಸಹಕಾರಿಯಾಯಿತು’ ಎಂದು ತಿಳಿಸಿದರು.</p>.<p>‘ಕಲಾಭಿರುಚಿ ಬೆಳೆಸುವಲ್ಲಿ ಕಾಲೇಜುಗಳಲ್ಲಿ ನಡೆಸುವಂತಹ ಕಾರ್ಯಾಗಾರಗಳು ಪೂರಕ. ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಇಂತಹ ಕಾರ್ಯಗಾರಗಳನ್ನು ಹಬ್ಬದ ರೀತಿ ಸಂಭ್ರಮಿಸಲಾಗುತ್ತದೆ’ ಎಂದರು.</p>.<p>ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ಫಾ.ಪ್ರವೀಣ್ ಮಾರ್ಟಿಸ್, ‘ಮನದ ದನಿಯನ್ನು ಆಲಿಸಿ, ಅದರ ಲಯಕ್ಕೆ ತಕ್ಕಂತೆ ನಡೆದರೆ ಬದುಕು ಸುಖಮಯವಾಗಬಲ್ಲುದು’ ಎಂದರು.</p>.<p>ನಾಲ್ಕು ದಿನಗಳ ಈ ಕಾರ್ಯಾಗಾರದಲ್ಲಿ ಸಂಗೀತ ಪರಿಕರಗಳನ್ನು ನುಡಿಸುವುದನ್ನು ಕಲಿಸಲಾಗುತ್ತದೆ ಎಂದು ಅನುಷ್ ಶೆಟ್ಟಿ ತಿಳಿಸಿದರು.</p>.<p>ಕಾರ್ಯಾಗಾರದ ಸಂಯೋಜಕರಾದ ಕ್ರಿಸ್ಟೋಫರ್ ಡಿಸೋಜ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕಂಠ ಸ್ವಾಮಿ, ಮುನ್ನಾ ಮೈಸೂರು, ಕೃಷ್ಣ ಚೈತನ್ಯ ಭಾಗವಹಿಸಿದ್ದರು. ಸ್ವೀಡಲ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.</p>.<p>ವಿಶ್ವವಿದ್ಯಾನಿಲಯದ ರಂಗ ಅಧ್ಯಯನ ಕೇಂದ್ರ ಹಾಗೂ ಖ್ಯಾತ ನಟ ಪ್ರಕಾಶ್ ರಾಜ್ ನೇತೃತ್ವದ 'ನಿರ್ದಿಗಂತ ’ ಜಂಟಿಯಾಗಿ ಏರ್ಪಡಿಸಿರುವ ‘ರಿದಂ' ಕಾರ್ಯಾಗಾರವು ಇದೇ 5ರವರೆಗೆ ನಡೆಯಲಿದೆ.</p>.<blockquote>ಸೇಂಟ್ ಅಲೋಶಿಸಯಸ್ ಪ್ರಾಂಗಣದಲ್ಲಿ ಇದೇ 5ರವರೆಗೆ ನಡೆಯಲಿದೆ ಕಾರ್ಯಾಗಾರ ಸಂಗೀತ ಪರಿಕರ ನುಡಿಸುವುದನ್ನು ಕಲಿಸಲಿದ್ದಾರೆ ಪರಿಣಿತ ಕಲಾವಿದರು</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಕಲೆಯನ್ನು ಎಲ್ಲರೂ ಸೇರಿ ಸಂಭ್ರಮಿಸಬೇಕು. ಕಲೆಯ ಬಗ್ಗೆ ಯುವ ಮನಸ್ಸುಗಳಲ್ಲಿ ಅಭಿರುಚಿ, ನಂಬಿಕೆ, ಗ್ರಹಿಕೆಯನ್ನು ಬೆಳೆಸುವುದು ಮುಖ್ಯ’ ಎಂದು ಸಿನಿಮಾ ನಟ ಪ್ರಕಾಶ್ ರಾಜ್ ಹೇಳಿದರು.</p>.<p>ಇಲ್ಲಿನ ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಪ್ರಾಂಗಣದಲ್ಲಿ ನಾಲ್ಕು ದಿನ ನಡೆಯಲಿರುವ 'ಬಿಯಾಂಡ್ ದಿ ಸ್ಕೋರ್ - ರಿದಂ' ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕಾಲೇಜು ದಿನಗಳಲ್ಲಿ ಕನ್ನಡ ಅಧ್ಯಾಪಕರು ಪಾಠದ ಜೊತೆ ಪದ್ಯವನ್ನು ವಿಮರ್ಶಿಸುವುದು ಹೇಗೆಂಬುದನ್ನು ಕಲಿಸಿದ್ದರು. ನಾನು ಸಾಹಿತ್ಯದ ಆಸಕ್ತಿ ಬೆಳೆಸಿಕೊಳ್ಳಲು ಇದು ಸಹಕಾರಿಯಾಯಿತು’ ಎಂದು ತಿಳಿಸಿದರು.</p>.<p>‘ಕಲಾಭಿರುಚಿ ಬೆಳೆಸುವಲ್ಲಿ ಕಾಲೇಜುಗಳಲ್ಲಿ ನಡೆಸುವಂತಹ ಕಾರ್ಯಾಗಾರಗಳು ಪೂರಕ. ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಇಂತಹ ಕಾರ್ಯಗಾರಗಳನ್ನು ಹಬ್ಬದ ರೀತಿ ಸಂಭ್ರಮಿಸಲಾಗುತ್ತದೆ’ ಎಂದರು.</p>.<p>ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ಫಾ.ಪ್ರವೀಣ್ ಮಾರ್ಟಿಸ್, ‘ಮನದ ದನಿಯನ್ನು ಆಲಿಸಿ, ಅದರ ಲಯಕ್ಕೆ ತಕ್ಕಂತೆ ನಡೆದರೆ ಬದುಕು ಸುಖಮಯವಾಗಬಲ್ಲುದು’ ಎಂದರು.</p>.<p>ನಾಲ್ಕು ದಿನಗಳ ಈ ಕಾರ್ಯಾಗಾರದಲ್ಲಿ ಸಂಗೀತ ಪರಿಕರಗಳನ್ನು ನುಡಿಸುವುದನ್ನು ಕಲಿಸಲಾಗುತ್ತದೆ ಎಂದು ಅನುಷ್ ಶೆಟ್ಟಿ ತಿಳಿಸಿದರು.</p>.<p>ಕಾರ್ಯಾಗಾರದ ಸಂಯೋಜಕರಾದ ಕ್ರಿಸ್ಟೋಫರ್ ಡಿಸೋಜ, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕಂಠ ಸ್ವಾಮಿ, ಮುನ್ನಾ ಮೈಸೂರು, ಕೃಷ್ಣ ಚೈತನ್ಯ ಭಾಗವಹಿಸಿದ್ದರು. ಸ್ವೀಡಲ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.</p>.<p>ವಿಶ್ವವಿದ್ಯಾನಿಲಯದ ರಂಗ ಅಧ್ಯಯನ ಕೇಂದ್ರ ಹಾಗೂ ಖ್ಯಾತ ನಟ ಪ್ರಕಾಶ್ ರಾಜ್ ನೇತೃತ್ವದ 'ನಿರ್ದಿಗಂತ ’ ಜಂಟಿಯಾಗಿ ಏರ್ಪಡಿಸಿರುವ ‘ರಿದಂ' ಕಾರ್ಯಾಗಾರವು ಇದೇ 5ರವರೆಗೆ ನಡೆಯಲಿದೆ.</p>.<blockquote>ಸೇಂಟ್ ಅಲೋಶಿಸಯಸ್ ಪ್ರಾಂಗಣದಲ್ಲಿ ಇದೇ 5ರವರೆಗೆ ನಡೆಯಲಿದೆ ಕಾರ್ಯಾಗಾರ ಸಂಗೀತ ಪರಿಕರ ನುಡಿಸುವುದನ್ನು ಕಲಿಸಲಿದ್ದಾರೆ ಪರಿಣಿತ ಕಲಾವಿದರು</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>