ರೈಲು ಸಂಚಾರಕ್ಕೆ ಅನುಮತಿ ನೀಡುವ ನಿಟ್ಟಿನಲ್ಲಿ ದಕ್ಷಿಣ ರೈಲ್ವೆಯ ಅಭಿಪ್ರಾಯ ವ್ಯಕ್ತಪಡಿಸಿದೆ. ಕರ್ನಾಟಕ, ತಮಿಳುನಾಡಿನಲ್ಲಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. ಕಣ್ಣೂರು, ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ, ರೋಗಿಗಳಿಗೆ ಏಕೈಕ ಆಶ್ರಯವೇ ಪ್ಯಾಸೆಂಜರ್ ರೈಲುಗಳು. ಆದರೆ ಸದ್ಯ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಸಾಮಾನ್ಯ ಬೋಗಿಗಳು ಇಲ್ಲದೇ ಇಲ್ಲದಿರುವುದು ಹಾಗೂ ಕೆಲವು ಸ್ಟೇಷನ್ಗಳಲ್ಲಿ ನಿಲುಗಡೆ ಇಲ್ಲದಿರುವುದು ವಿದ್ಯಾರ್ಥಿಗಳಿಗೆ ತೊಂದರೆ ಉಂಟು ಮಾಡಿದೆ.