<p><strong>ಉಜಿರೆ:</strong> ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಲು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸಲು ದೇಶದ ಸಮಗ್ರ ಚಿಂತನೆಯ ಹಿನ್ನೆಲೆಯಲ್ಲಿ ಸಾಹಿತ್ಯ ರಚನೆಯಾಗಬೇಕು ಎಂದು ಮಂಗಳೂರಿನ ಆಸರೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಹೇಳಿದರು.</p>.<p>ಧರ್ಮಸ್ಥಳದ ಸೂರ್ಯಕಮಲ್ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕು ಮಹಿಳಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾದೇಶಿಕ ಭಾಷೆಗಳಲ್ಲಿಯೂ ಸಾಹಿತ್ಯ ರಚನೆಯಾಗಬೇಕು. ತುಳುವಿನಲ್ಲಿ ಸಂಧಿ-ಪಾಡ್ದನಗಳ ಮೂಲಕ ಮೌಖಿಕ ಸಾಹಿತ್ಯ ಹೆಚ್ಚು ಜನಪ್ರಿಯವಾಗಿದೆ. ಮಹಿಳೆಯರ ಬಗ್ಗೆ ಪ್ರತಿಯೊಬ್ಬರ ಭಾವನೆಗಳು, ಚಿಂತನೆ ಯೋಚನೆಯೊಂದಿಗೆ ಅಂತರಂಗದ ಶುದ್ಧಿಗಾಗಿ ಸಾಹಿತ್ಯ ರಚನೆಯಾಗಬೇಕು. ಆಧುನಿಕ ಶಿಕ್ಷಣದಿಂದಾಗಿ ಮಹಿಳೆಯ ಯೋಚನೆಗಳು, ಭಾವನೆಗಳು ಪ್ರತ್ಯೇಕವಾಗಿರುತ್ತವೆ. ಕೇವಲ ವಿರೋಧಿಸುವುದಕ್ಕಾಗಿ ವಿರೋಧ ಸಲ್ಲದು ಎಂದರು.</p>.<p>ಸಮಾಜಕ್ಕೆ ಒಳಿತಾಗುವ ಸಾಹಿತ್ಯವನ್ನೇ ರಚಿಸಬೇಕು. ಬೆರಳೆಣಿಕೆಯಷ್ಟು ಮಹಿಳಾ ಸಾಹಿತಿಗಳಿದ್ದು, ಮಹಿಳೆಯರ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.</p>.<p>ದಿಕ್ಸೂಚಿ ಭಾಷಣ ಮಾಡಿದ ಮಂಗಳೂರಿನ ಪ್ರಾಧ್ಯಾಪಕಿ ಪ್ರಮೀಳಾ ರಾವ್, ಸಾಮಾಜಿಕ ಹಾಗೂ ಮಾನವೀಯ ಮೌಲ್ಯಗಳು ಕುಸಿಯುತ್ತಿದ್ದು, ಜಾನಪದ ಸಾಹಿತ್ಯವೂ ಕಣ್ಮರೆಯಾಗುತ್ತಿರುವುದು ಬೇಸರದ ವಿಷಯ ಎಂದರು.</p>.<p>ರಾಮನಗರದ ವಿನುತಾ ಕೆ.ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.</p>.<p>ಸ್ವಾಗತ ಸಮಿತಿ ಅಧ್ಯಕ್ಷೆ ಉಜಿರೆಯ ಸೋನಿಯಾವರ್ಮ ಸ್ವಾಗತಿಸಿದರು. ದಿವ್ಯಾ ಹೆಗಡೆ ಕಬ್ಬಿನಗದ್ದೆ ವಂದಿಸಿದರು.</p>.<h2>ಉದ್ಯೋಗದ ಭರವಸೆ ನೀಡಿ ವಂಚನೆ</h2>.<p>ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕಾಯರ್ತಡ್ಕ ನಿವಾಸಿ ಮಹಿಳೆಯೊಬ್ಬರಿಗೆ ಆನ್ಲೈನ್ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಅಪರಿಚಿತ ವ್ಯಕ್ತಿಯೊಬ್ಬ ₹4.25 ಲಕ್ಷ ವಂಚನೆ ಮಾಡಿದ್ದಾನೆ.</p>.<p>ಈ ಬಗ್ಗೆ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಲು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸಲು ದೇಶದ ಸಮಗ್ರ ಚಿಂತನೆಯ ಹಿನ್ನೆಲೆಯಲ್ಲಿ ಸಾಹಿತ್ಯ ರಚನೆಯಾಗಬೇಕು ಎಂದು ಮಂಗಳೂರಿನ ಆಸರೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಹೇಳಿದರು.</p>.<p>ಧರ್ಮಸ್ಥಳದ ಸೂರ್ಯಕಮಲ್ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕು ಮಹಿಳಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾದೇಶಿಕ ಭಾಷೆಗಳಲ್ಲಿಯೂ ಸಾಹಿತ್ಯ ರಚನೆಯಾಗಬೇಕು. ತುಳುವಿನಲ್ಲಿ ಸಂಧಿ-ಪಾಡ್ದನಗಳ ಮೂಲಕ ಮೌಖಿಕ ಸಾಹಿತ್ಯ ಹೆಚ್ಚು ಜನಪ್ರಿಯವಾಗಿದೆ. ಮಹಿಳೆಯರ ಬಗ್ಗೆ ಪ್ರತಿಯೊಬ್ಬರ ಭಾವನೆಗಳು, ಚಿಂತನೆ ಯೋಚನೆಯೊಂದಿಗೆ ಅಂತರಂಗದ ಶುದ್ಧಿಗಾಗಿ ಸಾಹಿತ್ಯ ರಚನೆಯಾಗಬೇಕು. ಆಧುನಿಕ ಶಿಕ್ಷಣದಿಂದಾಗಿ ಮಹಿಳೆಯ ಯೋಚನೆಗಳು, ಭಾವನೆಗಳು ಪ್ರತ್ಯೇಕವಾಗಿರುತ್ತವೆ. ಕೇವಲ ವಿರೋಧಿಸುವುದಕ್ಕಾಗಿ ವಿರೋಧ ಸಲ್ಲದು ಎಂದರು.</p>.<p>ಸಮಾಜಕ್ಕೆ ಒಳಿತಾಗುವ ಸಾಹಿತ್ಯವನ್ನೇ ರಚಿಸಬೇಕು. ಬೆರಳೆಣಿಕೆಯಷ್ಟು ಮಹಿಳಾ ಸಾಹಿತಿಗಳಿದ್ದು, ಮಹಿಳೆಯರ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.</p>.<p>ದಿಕ್ಸೂಚಿ ಭಾಷಣ ಮಾಡಿದ ಮಂಗಳೂರಿನ ಪ್ರಾಧ್ಯಾಪಕಿ ಪ್ರಮೀಳಾ ರಾವ್, ಸಾಮಾಜಿಕ ಹಾಗೂ ಮಾನವೀಯ ಮೌಲ್ಯಗಳು ಕುಸಿಯುತ್ತಿದ್ದು, ಜಾನಪದ ಸಾಹಿತ್ಯವೂ ಕಣ್ಮರೆಯಾಗುತ್ತಿರುವುದು ಬೇಸರದ ವಿಷಯ ಎಂದರು.</p>.<p>ರಾಮನಗರದ ವಿನುತಾ ಕೆ.ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.</p>.<p>ಸ್ವಾಗತ ಸಮಿತಿ ಅಧ್ಯಕ್ಷೆ ಉಜಿರೆಯ ಸೋನಿಯಾವರ್ಮ ಸ್ವಾಗತಿಸಿದರು. ದಿವ್ಯಾ ಹೆಗಡೆ ಕಬ್ಬಿನಗದ್ದೆ ವಂದಿಸಿದರು.</p>.<h2>ಉದ್ಯೋಗದ ಭರವಸೆ ನೀಡಿ ವಂಚನೆ</h2>.<p>ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕಾಯರ್ತಡ್ಕ ನಿವಾಸಿ ಮಹಿಳೆಯೊಬ್ಬರಿಗೆ ಆನ್ಲೈನ್ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಅಪರಿಚಿತ ವ್ಯಕ್ತಿಯೊಬ್ಬ ₹4.25 ಲಕ್ಷ ವಂಚನೆ ಮಾಡಿದ್ದಾನೆ.</p>.<p>ಈ ಬಗ್ಗೆ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>