ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಒಂದು ತಿಂಗಳಲ್ಲಿ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವ ವಿಷಯವನ್ನು ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ಕೇಂದ್ರ ಸರ್ಕಾರ ಇದಕ್ಕೆ ಅನುಮೋದನೆ ನೀಡದಿದ್ದಲ್ಲಿ, ಅಭಿಯಾನ ಮುಗಿಸುವವರೆಗೆ ಕಾದು ನೋಡಿ, ನಂತರ ವಿಮಾನ ನಿಲ್ದಾಣದ ಎದುದು ಜನ ಸಮಾವೇಶ ನಡೆಸಲು ಯೋಚಿಸಲಾಗಿದೆ. ಈ ಮೂಲಕ ಬಿಲ್ಲವರ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದರು.