ಮಂಗಳೂರು ಕಡೆಯಿಂದ ಮಾಣಿ ಮೂಲಕ ಪುತ್ತೂರು ಕಡೆಗೆ ತೆರಳುವ ಸೆಲಿನಾ ಹಾಗೂ ಸೇಪ್ವೇ ಸೇರಿದಂತೆ ಏಳು ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಸ್ ಗಳ ಗಾಜು ಸಂಪೂರ್ಣ ಧ್ವಂಸಗೊಂಡಿದೆ. ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿ ಅನೇಕ ಮಂದಿ ಪ್ರಯಾಣಿಸುತ್ತಿದ್ದು, ಕಿಟಕಿ ಗಾಜು ಹಾಗೂ ಕಲ್ಲಿನೇಟಿಗೆ ಮೂವರು ವಿದ್ಯಾರ್ಥಿಗಳಿಗೆ ತಲೆಭಾಗಕ್ಕೆ ಏಟಾಗಿದೆ.