ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು | ರೈಲಿಗೆ ಕಲ್ಲು: ತನಿಖೆ ಚುರುಕುಗೊಳಿಸಿದ ಪೊಲೀಸರು

Published 22 ಆಗಸ್ಟ್ 2023, 13:00 IST
Last Updated 22 ಆಗಸ್ಟ್ 2023, 13:00 IST
ಅಕ್ಷರ ಗಾತ್ರ

ಕಾಸರಗೋಡು: ಕಾಞಂಗಾಡು ನಿಲ್ದಾಣ ಬಳಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ ಪರಿಣಾಮ ಕಿಟಿಕಿ ಗಾಜುಗಳು ಪುಡಿಯಾಗಿವೆ.

ಸೋಮವಾರ ಮಧ್ಯಾಹ್ನ 3.48ರ ವೇಳೆಗೆ ಕಲ್ಲುತೂರಾಟ ನಡೆದಿದೆ. ಈ ಸಂಬಂಧ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾಞಂಗಾಡು ಡಿವೈಎಸ್‌ಪಿ ಪಿ.ಬಾಲಕೃಷ್ಣನ್ ನಾಯರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ರೈಲುಹಳಿಯ ಬಳಿ ಶಂಕಾಸ್ಪದ ರೀತಿ ಕಂಡು ಬಂದ 50 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ರೈಲುಗಾಡಿಗಳಲ್ಲೂ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT