<p><strong>ಮಂಗಳೂರು:</strong> ಬೀದಿನಾಯಿಗಳಿಗೂ ಬದುಕುವ ಹಕ್ಕು ಇದೆ. ಮೂಕಪ್ರಾಣಿಗಳ ಹಕ್ಕುಗಳನ್ನು ಗೌರವಿಸಬೇಕು ಎಂದು ಒತ್ತಾಯಿಸಿ ನಗರದ ಪ್ರಾಣಿಪ್ರಿಯರು ನಗರದ ಲಾಲ್ಭಾಗ್ನ ಪಾಲಿಕೆ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಬೀದಿನಾಯಿಗಳ ನಿರ್ವಹಣೆ ಸಂಬಂಧ ಸುಪ್ರೀಂ ಕೋರ್ಟ್ ಈಚೆಗೆ ನೀಡಿದ ಅಭಿಪ್ರಾಯವನ್ನೇ ಮುಂದಿಟ್ಟುಕೊಂಡು ಕೆಲವರು ಅವುಗಳಿಗೆ ಆಹಾರ ಹಾಕುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೀದಿನಾಯಿಗಳಿಗೆ ಊಟ ಹಾಕುವವರಿಗೆ ಕಿರುಕುಳ ನೀಡುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.</p>.<p>ಬೀದಿನಾಯಿಗಳ ನಿರ್ವಹಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೆಲವು ಮಾರ್ಗಸೂಚಿಗಳನ್ನಷ್ಟೇ ಹೊರಡಿಸಿದೆ. ಈ ಪ್ರಕರಣದ ಅಂತಿಮ ಆದೇಶ ಇನ್ನಷ್ಟೇ ಬರಬೇಕಿದೆ. ಮಾರ್ಗಸೂಚಿ ಪ್ರಕಾರ ಬೀದಿನಾಯಿಗಳ ಪುನರ್ವಸತಿಗೆ ಕ್ರಮವಹಿಸುವವರೆಗೆ ಅವುಗಳಿಗೆ ಹಿಂದಿನಂತೆಯೇ ಊಟ ಹಾಕಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. </p>.<p>ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ (ಎಬಿಸಿ) ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಸಾಕುನಾಯಿಗಳನ್ನು ಬೀದಿಯಲ್ಲಿ ಬಿಡುವವರ ವಿರುದ್ಧ ಕ್ರಮವಹಿಸಬೇಕು. ಬೀದಿನಾಯಿಗಳ ಆಹಾರ ತಾಣಗಳನ್ನು ಗೊತ್ತುಪಡಿಸಬೇಕು. ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳುವುದನ್ನು ಉತ್ತೇಜಿಸಬೇಕು ಎಂದೂ ಅವರು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ಪ್ರಾಣಿಪ್ರಿಯರಾದ ಹರೀಶ್ ರಾಜಕುಮಾರ್, ಡಾ.ಶ್ರುತಿ ರಾವ್, ಬಿಂದಿಯಾ, ಸುಮಾ ನಾಯಕ್ ಮಮತಾ ರಾವ್, ಶಾಲೆಟ್ ಮೊದಲಾದವರು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಬೀದಿನಾಯಿಗಳಿಗೂ ಬದುಕುವ ಹಕ್ಕು ಇದೆ. ಮೂಕಪ್ರಾಣಿಗಳ ಹಕ್ಕುಗಳನ್ನು ಗೌರವಿಸಬೇಕು ಎಂದು ಒತ್ತಾಯಿಸಿ ನಗರದ ಪ್ರಾಣಿಪ್ರಿಯರು ನಗರದ ಲಾಲ್ಭಾಗ್ನ ಪಾಲಿಕೆ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಬೀದಿನಾಯಿಗಳ ನಿರ್ವಹಣೆ ಸಂಬಂಧ ಸುಪ್ರೀಂ ಕೋರ್ಟ್ ಈಚೆಗೆ ನೀಡಿದ ಅಭಿಪ್ರಾಯವನ್ನೇ ಮುಂದಿಟ್ಟುಕೊಂಡು ಕೆಲವರು ಅವುಗಳಿಗೆ ಆಹಾರ ಹಾಕುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬೀದಿನಾಯಿಗಳಿಗೆ ಊಟ ಹಾಕುವವರಿಗೆ ಕಿರುಕುಳ ನೀಡುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.</p>.<p>ಬೀದಿನಾಯಿಗಳ ನಿರ್ವಹಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೆಲವು ಮಾರ್ಗಸೂಚಿಗಳನ್ನಷ್ಟೇ ಹೊರಡಿಸಿದೆ. ಈ ಪ್ರಕರಣದ ಅಂತಿಮ ಆದೇಶ ಇನ್ನಷ್ಟೇ ಬರಬೇಕಿದೆ. ಮಾರ್ಗಸೂಚಿ ಪ್ರಕಾರ ಬೀದಿನಾಯಿಗಳ ಪುನರ್ವಸತಿಗೆ ಕ್ರಮವಹಿಸುವವರೆಗೆ ಅವುಗಳಿಗೆ ಹಿಂದಿನಂತೆಯೇ ಊಟ ಹಾಕಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. </p>.<p>ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ (ಎಬಿಸಿ) ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಸಾಕುನಾಯಿಗಳನ್ನು ಬೀದಿಯಲ್ಲಿ ಬಿಡುವವರ ವಿರುದ್ಧ ಕ್ರಮವಹಿಸಬೇಕು. ಬೀದಿನಾಯಿಗಳ ಆಹಾರ ತಾಣಗಳನ್ನು ಗೊತ್ತುಪಡಿಸಬೇಕು. ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳುವುದನ್ನು ಉತ್ತೇಜಿಸಬೇಕು ಎಂದೂ ಅವರು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿ ಪ್ರಾಣಿಪ್ರಿಯರಾದ ಹರೀಶ್ ರಾಜಕುಮಾರ್, ಡಾ.ಶ್ರುತಿ ರಾವ್, ಬಿಂದಿಯಾ, ಸುಮಾ ನಾಯಕ್ ಮಮತಾ ರಾವ್, ಶಾಲೆಟ್ ಮೊದಲಾದವರು ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>