ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕನನ್ನು ತಪಾಸಣೆಗೆ ಒಳಪಡಿಸ ಲಾಗಿತ್ತು. ಈ ವೇಳೆ ಆರೋಪಿಯು 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ, ಗಮ್ನೊಂದಿಗೆ ಸೇರಿಸಿ, ಗುದನಾಳದಲ್ಲಿ ಇಟ್ಟು ಸಾಗಣೆ ಮಾಡು ತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.