<p><strong>ಉಜಿರೆ:</strong> ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ ಅನಿತಾ (17) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬೆಳ್ತಂಗಡಿಯ ಖಾಸಗಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕೆಲವು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ ಭಟ್ಕಳದಲ್ಲಿ</h2>.<p>ಉಜಿರೆ: ಧರ್ಮಸ್ಥಳ ಗ್ರಾಮದ ಕನ್ಯಾಡಿಯ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಜುಲೈ 21ರಿಂದ ಆ.30ರ ವರೆಗೆ ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಚಾತುರ್ಮಾಸ ವ್ರತಾಚರಣೆ ನಡೆಸಲಿದ್ದಾರೆ.</p>.<p>ಕಾರ್ಯಕ್ರಮವನ್ನು ಜುಲೈ 31ರಂದು ಬೆಳಿಗ್ಗೆ 11ಕ್ಕೆ ಸಚಿವ ಮಂಕಾಳ್ ಎಸ್.ವೈದ್ಯ ಉದ್ಘಾಟಿಸುವರು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿಕ್ಷಣ ಸಚಿವ ಮಧುಬಂಗಾರಪ್ಪ ಭಾಗವಹಿಸುವರು. ಪ್ರತಿ ದಿನ ಧಾರ್ಮಿಕ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.</p>.<h2>ಜಲಪಾತ, ಗಡಾಯಿಕಲ್ಲು ಚಾರಣ ನಿರ್ಬಂಧ</h2>.<p>ಉಜಿರೆ: ಭಾರಿ ಮಳೆಯಿಂದಾಗಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಬಂಡಾಜೆ, ಎರ್ಮಾಯಿ, ಕಡಮಗುಂಡಿ, ಎಳನೀರು ಮೊದಲಾದ ಜಲಪಾತಗಳಿಗೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಸ್ವಾತಿ ತಿಳಿಸಿದ್ದಾರೆ.</p>.<p>ಜಮಾಲಾಬಾದ್ (ಗಡಾಯಿಕಲ್ಲು) ಪ್ರದೇಶದಲ್ಲಿ ಚಾರಣಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ ಅನಿತಾ (17) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಬೆಳ್ತಂಗಡಿಯ ಖಾಸಗಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕೆಲವು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ ಭಟ್ಕಳದಲ್ಲಿ</h2>.<p>ಉಜಿರೆ: ಧರ್ಮಸ್ಥಳ ಗ್ರಾಮದ ಕನ್ಯಾಡಿಯ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಜುಲೈ 21ರಿಂದ ಆ.30ರ ವರೆಗೆ ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಚಾತುರ್ಮಾಸ ವ್ರತಾಚರಣೆ ನಡೆಸಲಿದ್ದಾರೆ.</p>.<p>ಕಾರ್ಯಕ್ರಮವನ್ನು ಜುಲೈ 31ರಂದು ಬೆಳಿಗ್ಗೆ 11ಕ್ಕೆ ಸಚಿವ ಮಂಕಾಳ್ ಎಸ್.ವೈದ್ಯ ಉದ್ಘಾಟಿಸುವರು. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿಕ್ಷಣ ಸಚಿವ ಮಧುಬಂಗಾರಪ್ಪ ಭಾಗವಹಿಸುವರು. ಪ್ರತಿ ದಿನ ಧಾರ್ಮಿಕ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.</p>.<h2>ಜಲಪಾತ, ಗಡಾಯಿಕಲ್ಲು ಚಾರಣ ನಿರ್ಬಂಧ</h2>.<p>ಉಜಿರೆ: ಭಾರಿ ಮಳೆಯಿಂದಾಗಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಬಂಡಾಜೆ, ಎರ್ಮಾಯಿ, ಕಡಮಗುಂಡಿ, ಎಳನೀರು ಮೊದಲಾದ ಜಲಪಾತಗಳಿಗೆ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಸ್ವಾತಿ ತಿಳಿಸಿದ್ದಾರೆ.</p>.<p>ಜಮಾಲಾಬಾದ್ (ಗಡಾಯಿಕಲ್ಲು) ಪ್ರದೇಶದಲ್ಲಿ ಚಾರಣಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>