ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನೇಹಿತೆ ಬಳಿ ಮಾತನಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ಪ್ರಕರಣ ದಾಖಲು

Last Updated 31 ಆಗಸ್ಟ್ 2022, 9:12 IST
ಅಕ್ಷರ ಗಾತ್ರ

ಸುಳ್ಯ: ಇಲ್ಲಿನ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಮಾತನಾಡುತ್ತಿರುವುದನ್ನು ಕಂಡ ಕೆಲವು ವಿದ್ಯಾರ್ಥಿಗಳು ಆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಮ್ಮದ್ ಸನೀಫ್ (19) ಹಲ್ಲೆಗೆ ಒಳಗಾದ ವಿದ್ಯಾರ್ಥಿ.ಕ್ಲಾಸ್ ರೂಮ್ ನಲ್ಲಿ ಇರುವಾಗ ಮಾತನಾಡುವುದಿದೆ ಎಂದು ಕರೆದ ಕೆಲವು ಸಹಪಾಠಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡು ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ ಮಹಮ್ಮದ್ ಸನೀಫ್ ದೂರಿನಲ್ಲಿ ತಿಳಿಸಿದ್ದಾರೆ‌.

ಈ ಸಂಬಂಧ ಕೊಡಿಯಾಲ್ ಬೈಲು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ದೀಕ್ಷಿತ್, ಧನುಷ್ , ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಮೇಲೆ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT