<p><strong>ಪುತ್ತೂರು (ದಕ್ಷಿಣ ಕನ್ನಡ):</strong> ಕಾಲೇಜಿಗೆ ತೆರಳುತ್ತಿದ್ದ ಪ್ರಥಮ ಪಿ.ಯು ವಿದ್ಯಾರ್ಥಿನಿ ಕೈಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ ಆರೋಪವನ್ನು ಪುಷ್ಟೀಕರಿಸುವ ಸಾಕ್ಷ್ಯ ಲಭ್ಯವಾಗಿಲ್ಲ ಎಂಬ ಕಾರಣಕ್ಕೆ, ಕಾನೂನಿನ ಸಂಘರ್ಷಕ್ಕೆ ಸಿಲುಕಿದ ವಿದ್ಯಾರ್ಥಿಯನ್ನು ಪೊಲೀಸರು ಮಂಗಳವಾರ ರಾತ್ರಿಯೇ ಬಿಟ್ಟು ಕಳುಹಿಸಿದ್ದಾರೆ.</p>.<p>‘ಹಿಂದೂ ಸಮುದಾಯದ ವಿದ್ಯಾರ್ಥಿಯೊಬ್ಬ ಹಿಂಬಾಲಿಸಿಕೊಂಡು ಬಂದು ಪ್ರೇಮ ನಿವೇದನೆ ಮಾಡಿದ್ದ. ಆತನ ಕೋರಿಕೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಹರಿತ ಆಯುಧದಿಂದ ಕೈಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ’ ಎಂದು ಅಪ್ರಾಪ್ತ ವಯಸ್ಸಿನ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದಳು. ಈ ಸಂಬಂಧ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. </p>.<p>‘ನಗರದ ವಿವಿಧ ಕಡೆಗಳಲ್ಲಿನ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾದ ದೃಶ್ಯಗಳನ್ನು ಪರಿಶೀಲಿಸಿದಾಗ ವಿದ್ಯಾರ್ಥಿನಿ ಮಾಡಿರುವ ಆರೋಪವನ್ನು ಪುಷ್ಟೀಕರಿಸುವ ಸಾಕ್ಷ್ಯಗಳು ಲಭ್ಯವಾಗಿಲ್ಲ. ವಿಚಾರಣೆ ನಡೆಸಿದ ಬಳಿಕ ಬಾಲಕನನ್ನು ಬಿಟ್ಟು ಕಳುಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದೆ. ವೈಜ್ಞಾನಿಕ ಮತ್ತು ಕಾನೂನಾತ್ಮಕವಾಗಿ ಬೇರೆ ಬೇರೆ ಆಯಾಮಗಳಿಂದ ಪರಿಶೀಲಿಸಲಾಗುತ್ತಿದೆ. ಸತ್ಯಸಂಗತಿ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದೇವೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು (ದಕ್ಷಿಣ ಕನ್ನಡ):</strong> ಕಾಲೇಜಿಗೆ ತೆರಳುತ್ತಿದ್ದ ಪ್ರಥಮ ಪಿ.ಯು ವಿದ್ಯಾರ್ಥಿನಿ ಕೈಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ ಆರೋಪವನ್ನು ಪುಷ್ಟೀಕರಿಸುವ ಸಾಕ್ಷ್ಯ ಲಭ್ಯವಾಗಿಲ್ಲ ಎಂಬ ಕಾರಣಕ್ಕೆ, ಕಾನೂನಿನ ಸಂಘರ್ಷಕ್ಕೆ ಸಿಲುಕಿದ ವಿದ್ಯಾರ್ಥಿಯನ್ನು ಪೊಲೀಸರು ಮಂಗಳವಾರ ರಾತ್ರಿಯೇ ಬಿಟ್ಟು ಕಳುಹಿಸಿದ್ದಾರೆ.</p>.<p>‘ಹಿಂದೂ ಸಮುದಾಯದ ವಿದ್ಯಾರ್ಥಿಯೊಬ್ಬ ಹಿಂಬಾಲಿಸಿಕೊಂಡು ಬಂದು ಪ್ರೇಮ ನಿವೇದನೆ ಮಾಡಿದ್ದ. ಆತನ ಕೋರಿಕೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಹರಿತ ಆಯುಧದಿಂದ ಕೈಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ’ ಎಂದು ಅಪ್ರಾಪ್ತ ವಯಸ್ಸಿನ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದಳು. ಈ ಸಂಬಂಧ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. </p>.<p>‘ನಗರದ ವಿವಿಧ ಕಡೆಗಳಲ್ಲಿನ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾದ ದೃಶ್ಯಗಳನ್ನು ಪರಿಶೀಲಿಸಿದಾಗ ವಿದ್ಯಾರ್ಥಿನಿ ಮಾಡಿರುವ ಆರೋಪವನ್ನು ಪುಷ್ಟೀಕರಿಸುವ ಸಾಕ್ಷ್ಯಗಳು ಲಭ್ಯವಾಗಿಲ್ಲ. ವಿಚಾರಣೆ ನಡೆಸಿದ ಬಳಿಕ ಬಾಲಕನನ್ನು ಬಿಟ್ಟು ಕಳುಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದೆ. ವೈಜ್ಞಾನಿಕ ಮತ್ತು ಕಾನೂನಾತ್ಮಕವಾಗಿ ಬೇರೆ ಬೇರೆ ಆಯಾಮಗಳಿಂದ ಪರಿಶೀಲಿಸಲಾಗುತ್ತಿದೆ. ಸತ್ಯಸಂಗತಿ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದೇವೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>