<p><strong>ಪುತ್ತೂರು:</strong> ಮುಳುಗು ಸೇತುವೆ ಎಂದೇ ಖ್ಯಾತಿ ಪಡೆದಿರುವ ಪುತ್ತೂರು- ಪರ್ಲಡ್ಕ- ಕುಂಜೂರುಪಂಜ- ಪಾಣಾಜೆ ರಸ್ತೆಯಲ್ಲಿ ಇರ್ದೆ ಗ್ರಾಮದ ಚೆಲ್ಯಡ್ಕದಲ್ಲಿರುವ ಸೇತುವೆ ಈ ಬಾರಿಯ ಮಳೆಗಾಲದಲ್ಲಿ ಮೊದಲ ಬಾರಿಗೆ ಮುಳುಗಡೆಯಾಗಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.</p>.<p>ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಗುರುವಾರ ಬೆಳಿಗ್ಗೆಯಿಂದಲೇ ಸೇತುವೆ ಮುಳುಗಡೆಯಾಗಿದೆ.</p>.<p>ಪುತ್ತೂರು- ಪರ್ಲಡ್ಕ- ಕುಂಜೂರುಪಂಜ ರಸ್ತೆಯಲ್ಲಿ ಖಾಸಗಿ ಬಸ್ ಓಡಾಟ ಮಾತ್ರ ಇದ್ದು, ಸೇತುವೆ ಮುಳುಗಡೆಯಾಗಿರುವುದರಿಂದ ಖಾಸಗಿ ಬಸ್ ಸಂಚಾರ ಸಂಚಾರ ಸ್ಥಗಿತಗೊಂಡಿದೆ. ದೈನಂದಿನ ಕಾರ್ಯಗಳಿಗೆ ಪೇಟೆಗೆ ತೆರಳುವ ಗುಮ್ಮಟೆಗದ್ದೆ, ಅಜ್ಜಿಕಲ್ಲು, ದೇವಸ್ಯ ಭಾಗದ ಜನ ಸಮಸ್ಯೆ ಅನುಭವಿಸುವಂತಾಗಿದೆ.</p>.<p>ಸೇತುವೆ ಮುಳುಗಡೆಯಾಗಿರುವುದರಿಂದ ಪುತ್ತೂರು- ಪರ್ಲಡ್ಕ- ಕುಂಜೂರುಪಂಜ ಪಾಣಾಜೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಗಳು ಪುತ್ತೂರಿನಿಂದ ಮಾಣಿ– ಮೈಸೂರು– ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಟ್ಯಾರು-ಕೈಕಾರ ರಸ್ತೆ ಮೂಲಕ ತೆರಳುತ್ತಿವೆ. ವಾಹನ ಸವಾರರೂ ಇದೇ ರಸ್ತೆ ಬಳಸಿಕೊಂಡು ಪ್ರಯಾಣಿಸುತ್ತಿದ್ದಾರೆ.</p>.<p>ಶಿಥಿಲ ಸೇತುವೆ:</p>.<p>ಚೆಲ್ಯಡ್ಕ ಮುಳುಗು ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ಸೇತುವೆಯ ಕೆಲವು ಭಾಗದಲ್ಲಿ ಆಧಾರಸ್ತಂಭಕ್ಕೆ ಬಳಸಿದ ಕಲ್ಲುಗಳು, ಕಬ್ಬಿಣದ ರಾಡ್ಗಳು ಕಳಚಿಕೊಂಡಿವೆ. ಸೇತುವೆಯ ಕೆಳಭಾಗದಲ್ಲಿ ಎರಡೂ ಬದಿಯ ಮಣ್ಣು ಕೊಚ್ಚಿಕೊಂಡು ಹೋಗಿದೆ. ಹಳೆಯದಾದ ಈ ಸೇತುವೆ ಕುಸಿಯುವ ಅಪಾಯದಲ್ಲಿದ್ದು, ಅಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಬೇಕು ಎಂಬ ಆಗ್ರಹಕ್ಕೆ ಸ್ಪಂದನೆ ಸಿಕ್ಕಿಲ್ಲ. ಕಳೆದ ಚೆಲ್ಯಡ್ಕ ಮುಳುಗು ಸೇತುವೆ ಕಳೆದ ಮಳೆಗಾಲದಲ್ಲಿ 5 ಬಾರಿ ಮುಳುಗಡೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಮುಳುಗು ಸೇತುವೆ ಎಂದೇ ಖ್ಯಾತಿ ಪಡೆದಿರುವ ಪುತ್ತೂರು- ಪರ್ಲಡ್ಕ- ಕುಂಜೂರುಪಂಜ- ಪಾಣಾಜೆ ರಸ್ತೆಯಲ್ಲಿ ಇರ್ದೆ ಗ್ರಾಮದ ಚೆಲ್ಯಡ್ಕದಲ್ಲಿರುವ ಸೇತುವೆ ಈ ಬಾರಿಯ ಮಳೆಗಾಲದಲ್ಲಿ ಮೊದಲ ಬಾರಿಗೆ ಮುಳುಗಡೆಯಾಗಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.</p>.<p>ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಗುರುವಾರ ಬೆಳಿಗ್ಗೆಯಿಂದಲೇ ಸೇತುವೆ ಮುಳುಗಡೆಯಾಗಿದೆ.</p>.<p>ಪುತ್ತೂರು- ಪರ್ಲಡ್ಕ- ಕುಂಜೂರುಪಂಜ ರಸ್ತೆಯಲ್ಲಿ ಖಾಸಗಿ ಬಸ್ ಓಡಾಟ ಮಾತ್ರ ಇದ್ದು, ಸೇತುವೆ ಮುಳುಗಡೆಯಾಗಿರುವುದರಿಂದ ಖಾಸಗಿ ಬಸ್ ಸಂಚಾರ ಸಂಚಾರ ಸ್ಥಗಿತಗೊಂಡಿದೆ. ದೈನಂದಿನ ಕಾರ್ಯಗಳಿಗೆ ಪೇಟೆಗೆ ತೆರಳುವ ಗುಮ್ಮಟೆಗದ್ದೆ, ಅಜ್ಜಿಕಲ್ಲು, ದೇವಸ್ಯ ಭಾಗದ ಜನ ಸಮಸ್ಯೆ ಅನುಭವಿಸುವಂತಾಗಿದೆ.</p>.<p>ಸೇತುವೆ ಮುಳುಗಡೆಯಾಗಿರುವುದರಿಂದ ಪುತ್ತೂರು- ಪರ್ಲಡ್ಕ- ಕುಂಜೂರುಪಂಜ ಪಾಣಾಜೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಗಳು ಪುತ್ತೂರಿನಿಂದ ಮಾಣಿ– ಮೈಸೂರು– ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಟ್ಯಾರು-ಕೈಕಾರ ರಸ್ತೆ ಮೂಲಕ ತೆರಳುತ್ತಿವೆ. ವಾಹನ ಸವಾರರೂ ಇದೇ ರಸ್ತೆ ಬಳಸಿಕೊಂಡು ಪ್ರಯಾಣಿಸುತ್ತಿದ್ದಾರೆ.</p>.<p>ಶಿಥಿಲ ಸೇತುವೆ:</p>.<p>ಚೆಲ್ಯಡ್ಕ ಮುಳುಗು ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ಸೇತುವೆಯ ಕೆಲವು ಭಾಗದಲ್ಲಿ ಆಧಾರಸ್ತಂಭಕ್ಕೆ ಬಳಸಿದ ಕಲ್ಲುಗಳು, ಕಬ್ಬಿಣದ ರಾಡ್ಗಳು ಕಳಚಿಕೊಂಡಿವೆ. ಸೇತುವೆಯ ಕೆಳಭಾಗದಲ್ಲಿ ಎರಡೂ ಬದಿಯ ಮಣ್ಣು ಕೊಚ್ಚಿಕೊಂಡು ಹೋಗಿದೆ. ಹಳೆಯದಾದ ಈ ಸೇತುವೆ ಕುಸಿಯುವ ಅಪಾಯದಲ್ಲಿದ್ದು, ಅಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಬೇಕು ಎಂಬ ಆಗ್ರಹಕ್ಕೆ ಸ್ಪಂದನೆ ಸಿಕ್ಕಿಲ್ಲ. ಕಳೆದ ಚೆಲ್ಯಡ್ಕ ಮುಳುಗು ಸೇತುವೆ ಕಳೆದ ಮಳೆಗಾಲದಲ್ಲಿ 5 ಬಾರಿ ಮುಳುಗಡೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>