ಬಳ್ಪದ ಬೋಗಯನಕೆರೆ ಎಂಬಲ್ಲಿಂದ ಅವರ ಮನೆಗೆ 3. ಕೀ ಮೀ ಅಂತರವಿದ್ದು, ಕಚ್ಚಾ ರಸ್ತೆ ಇದೆ. ಅದು, ಕಿತ್ತು ಹೋದ ಡಾಂಬರು, ಹೊಂಡಗಳು, ಹಳ್ಳಕೊಳ್ಳಗಳ ನಡುವೆ ಹಾದುಹೋದ ರಸ್ತೆ. ಮಳೆಗಾಲದಲ್ಲಿ ಕೆಸರು ತುಂಬಿರುತ್ತದೆ. ವಾಹನ ಮಾತ್ರವಲ್ಲ, ನಡೆದಾಡುವುದೂ ಕಷ್ಟ. ಇಂತಹ ಸ್ಥಿತಿಯಲ್ಲೂ ಆತನ ಸಾಧನೆ ಮೆಚ್ಚುವಂತದ್ದು ಎಂದು ಮಾತಿಗೆ ಸಿಕ್ಕ ಊರವರು ಪ್ರತಿಕ್ರಿಯಿಸಿದರು.