<p><strong>ಸುಬ್ರಹ್ಮಣ್ಯ</strong>: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದ ಅಭಿವೃದ್ಧಿ, ಮಳೆಗಾಲದಲ್ಲಿ ಭಕ್ತರ ಸುರಕ್ಷತೆಗೆ ಕ್ರಮ, ವಾಹನ ನಿಲುಗಡೆ ವ್ಯವಸ್ಥೆ, ಸ್ವಚ್ಛತಾ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂಬ ಆಗ್ರಹ ಇಲ್ಲಿನ ಸ್ನಾನಘಟ್ಟದ ವಾಹನ ನಿಲುಗಡೆ ವ್ಯವಸ್ಥೆ ಕುರಿತು ನಡೆದ ಸಮಾಲೋಚನಾ ಸಭೆಯಲ್ಲಿ ಕೇಳಿಬಂತು.</p>.<p>ಕೆಡಿಪಿ ಸದಸ್ಯ ಶಿವರಾಮ ರೈ ಮಾತನಾಡಿ, ಕುಮಾರಧಾರಾ ಸ್ನಾನಘಟ್ಟಕ್ಕೆ ಸಾವಿರಾರು ಭಕ್ತರು ಬರುತ್ತಿದ್ದು, ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ. ಸ್ನಾನಘಟ್ಟದ ಬಳಿ ಸ್ವಚ್ಛತೆ, ವಾಹನ ನಿಲುಗಡೆ ಹಾಗೂ ಭಕ್ತರ ಅನುಕೂಲಕ್ಕೆ ಸೌಲಭ್ಯ ಕಲ್ಪಿಸಬೇಕು ಎಂದರು.</p>.<p>ಬಸ್ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು, ರಸ್ತೆ ಬದಿಯ ಜಾಗವನ್ನು ವಾಹನ ನಿಲುಗಡೆಗೆ ಬಳಸಿಕೊಳ್ಳುವುದು, ಮಳೆಗಾಲದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ವಿಷಯಗಳನ್ನು ಸಭೆಯ ಗಮನಕ್ಕೆ ತಂದರು. ಸಭೆಯಲ್ಲಿ ಭಾಗವಹಿಸಿದ್ದ ಹಲವರು ಸಲಹೆ ನೀಡಿದರು.</p>.<p>ಸ್ನಾನಘಟ್ಟ ಹಾಗೂ ಸುತ್ತಮುತ್ತ ಸೂಚನಾ ಫಲಕ ಅಳವಡಿಕೆ, ರಸ್ತೆ ವಿಸ್ತರಣೆ, ಕುಮಾರಧಾರಾ ಸೇತುವೆ ಬಳಿ ವೇಗಮಿತಿ ಫಲಕ ಅಳವಡಿಕೆ, ಮಳೆಗಾಲದಲ್ಲಿ ಸುರಕ್ಷತಾ ಬೇಲಿ ನಿರ್ಮಾಣ, ಶೌಚಾಲಯ ವ್ಯವಸ್ಥೆ, ಗೋಪುರ ಸಮೀಪ ಬಸ್ ನಿಲ್ದಾಣ ನಿರ್ಮಾಣ ಬೀದಿ ದೀಪಗಳ ದುರಸ್ತಿ ಬಗ್ಗೆ ನಿರ್ಣಯಿಸಲಾಯಿತು.</p>.<p>ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಕಾಂತ ಪಿ., ಸಹಾಯಕ ಎಂಜಿನಿಯರ್ ಪ್ರಮೋದ್ ಕುಮಾರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಪಂಚಾಯಿತಿ ಕಾರ್ಯದರ್ಶಿ ಮೋನಪ್ಪ ಡಿ. ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-29-1177869241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ</strong>: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದ ಅಭಿವೃದ್ಧಿ, ಮಳೆಗಾಲದಲ್ಲಿ ಭಕ್ತರ ಸುರಕ್ಷತೆಗೆ ಕ್ರಮ, ವಾಹನ ನಿಲುಗಡೆ ವ್ಯವಸ್ಥೆ, ಸ್ವಚ್ಛತಾ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂಬ ಆಗ್ರಹ ಇಲ್ಲಿನ ಸ್ನಾನಘಟ್ಟದ ವಾಹನ ನಿಲುಗಡೆ ವ್ಯವಸ್ಥೆ ಕುರಿತು ನಡೆದ ಸಮಾಲೋಚನಾ ಸಭೆಯಲ್ಲಿ ಕೇಳಿಬಂತು.</p>.<p>ಕೆಡಿಪಿ ಸದಸ್ಯ ಶಿವರಾಮ ರೈ ಮಾತನಾಡಿ, ಕುಮಾರಧಾರಾ ಸ್ನಾನಘಟ್ಟಕ್ಕೆ ಸಾವಿರಾರು ಭಕ್ತರು ಬರುತ್ತಿದ್ದು, ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ. ಸ್ನಾನಘಟ್ಟದ ಬಳಿ ಸ್ವಚ್ಛತೆ, ವಾಹನ ನಿಲುಗಡೆ ಹಾಗೂ ಭಕ್ತರ ಅನುಕೂಲಕ್ಕೆ ಸೌಲಭ್ಯ ಕಲ್ಪಿಸಬೇಕು ಎಂದರು.</p>.<p>ಬಸ್ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು, ರಸ್ತೆ ಬದಿಯ ಜಾಗವನ್ನು ವಾಹನ ನಿಲುಗಡೆಗೆ ಬಳಸಿಕೊಳ್ಳುವುದು, ಮಳೆಗಾಲದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ವಿಷಯಗಳನ್ನು ಸಭೆಯ ಗಮನಕ್ಕೆ ತಂದರು. ಸಭೆಯಲ್ಲಿ ಭಾಗವಹಿಸಿದ್ದ ಹಲವರು ಸಲಹೆ ನೀಡಿದರು.</p>.<p>ಸ್ನಾನಘಟ್ಟ ಹಾಗೂ ಸುತ್ತಮುತ್ತ ಸೂಚನಾ ಫಲಕ ಅಳವಡಿಕೆ, ರಸ್ತೆ ವಿಸ್ತರಣೆ, ಕುಮಾರಧಾರಾ ಸೇತುವೆ ಬಳಿ ವೇಗಮಿತಿ ಫಲಕ ಅಳವಡಿಕೆ, ಮಳೆಗಾಲದಲ್ಲಿ ಸುರಕ್ಷತಾ ಬೇಲಿ ನಿರ್ಮಾಣ, ಶೌಚಾಲಯ ವ್ಯವಸ್ಥೆ, ಗೋಪುರ ಸಮೀಪ ಬಸ್ ನಿಲ್ದಾಣ ನಿರ್ಮಾಣ ಬೀದಿ ದೀಪಗಳ ದುರಸ್ತಿ ಬಗ್ಗೆ ನಿರ್ಣಯಿಸಲಾಯಿತು.</p>.<p>ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಕಾಂತ ಪಿ., ಸಹಾಯಕ ಎಂಜಿನಿಯರ್ ಪ್ರಮೋದ್ ಕುಮಾರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಪಂಚಾಯಿತಿ ಕಾರ್ಯದರ್ಶಿ ಮೋನಪ್ಪ ಡಿ. ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-29-1177869241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>