ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣ್ಯ: ಸಂಪನ್ನಗೊಂಡ 52ನೇ ಗಣೇಶೋತ್ಸವ

ಕುಮಾರಧಾರದಲ್ಲಿ ಜಲಸ್ತಂಭನ, ಹರಿದು ಬಂದ ಭಕ್ತಸಾಗರ
Last Updated 5 ಸೆಪ್ಟೆಂಬರ್ 2022, 16:18 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 52ನೇ ವರ್ಷದ ಗಣೇಶೋತ್ಸವವು ವಿವಿಧ ವೈಧಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿ, ಗಣಪತಿ ಶೋಭಾಯಾತ್ರೆ ಮೂಲಕ ಸಂಪನ್ನಗೊಂಡಿತು.

ಭಾನುವಾರ ರಾತ್ರಿ ಕುಮಾರಧಾರದಲ್ಲಿ ಪುರೋಹಿತ ರಮಾನಂದ ಭಟ್ ವೈದಿಕ ವಿಧಿಗಳನ್ನು ನೆರವೇರಿಸಿದ ಬಳಿಕ ದೇವರ ವಿಗ್ರಹವನ್ನು ಜಲಸ್ತಂಭನಗೊಳಿಸಲಾಯಿತು. ದೇವಳದ ರಥಬೀದಿಯಿಂದ ಹೊರ ಮೆರವಣಿಗೆಯ ಉದ್ದಕ್ಕೂ ಭಕ್ತರು ದೇವರಿಗೆ ಹಣ್ಣುಕಾಯಿ ಅರ್ಪಿಸಿ, ಮಂಗಳಾರತಿ ನೀಡಿದರು.

ಶೋಭಾಯಾತ್ರೆಗೆ ಆಕರ್ಷಕ ಕುಣಿತ ಭಜನೆ, ಹಲವು ಸ್ತಬ್ದಚಿತ್ರಗಳು ಮೆರುಗು ನೀಡಿದವು. ಚಾರ್ವಕ ಕಪಿಲೇಶ್ವರ ಸಿಂಗಾರಿ ಮೇಳದ ಚೆಂಡೆ ಮೇಳ, ಬಂಟ್ವಾಳ ಚಿಲಿಪಿಲಿ ಗೊಂಬೆ ಬಳಗದಆಕರ್ಷಕ ಗೊಂಬೆಗಳು ಮತ್ತು ಕೀಲು ಕುದುರೆ, ಬ್ಯಾಂಡ್ ವಾದ್ಯ, ಯಕ್ಷಗಾನ ವೇಷಭೂಷಣ ಗಮನ ಸೆಳೆಯಿತು. ಕುಕ್ಕೆಶ್ರೀ ಅಟೋ ಚಾಲಕ ಮಾಲೀಕರ ಸಂಘದಿಂದ ಪಾನಕ ವ್ಯವಸ್ಥೆ, ಸಮಿತಿಯ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವೆಂಕಟೇಶ್ ಎಚ್.ಎಲ್ ಸೇರಿದಂತೆ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಸಮಿತಿ ಸದಸ್ಯರು, ಪೂರ್ವಾಧ್ಯಕ್ಷರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT