ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆ ಲೆಫ್ಟಿನೆಂಟ್

Published 10 ಮಾರ್ಚ್ 2024, 4:13 IST
Last Updated 10 ಮಾರ್ಚ್ 2024, 4:13 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಭೂಸೇನೆಯ ಲೆಫ್ಟಿನೆಂಟ್ ಆಗಿ ಸುಬ್ರಹ್ಮಣ್ಯ ಗ್ರಾಮದ ನೂಚಿಲ ನಿವಾಸಿ ಅಜಿತೇಶ್‌ ಪಿ.ಎಸ್.ಪೆರ್ಮುಖ ನಿಯುಕ್ತಿಗೊಂಡಿದ್ದಾರೆ.

ಅಜಿತೇಶ್ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪದವಿಪೂರ್ವ ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಫಾರೆಸ್ಟರಿಯಲ್ಲಿ ಬಿಎಸ್‌ಸಿ ಪದವಿಯನ್ನು ಮಡಿಕೇರಿ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದು ಬಳಿಕ ಡೆಹ್ರಾಡೂನ್‌ನ ಫಾರೆಸ್ಟ್ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ನಲ್ಲಿ ದ್ವಿತೀಯ ಎಂಎಸ್ಸಿ ಪದವಿ ವ್ಯಾಸಂಗ ಮಾಡಿದ್ದರು. ಅಜಿತೇಶ್ ಕಳೆದ ವರ್ಷ ನಡೆದ ಭೂಸೇನೆ ನೇಮಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, ಒಂದು ವರ್ಷ ಚೆನೈನ ಭಾರತೀಯ ಸೇನಾ ಅಧಿಕಾರಿಗಳ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದರು. ಅಜಿತೇಶ್ ಅವರು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ವಿದ್ಯಾರತ್ನ ಹಾಗೂ ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಶ್ರೀಕೃಷ್ಣ ಶರ್ಮ ಪಿ.ಅವರ ಪುತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT