ಆಸ್ಕರ್ ಫರ್ನಾಂಡಿಸ್ರ ತಲೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮಿದುಳಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿದೆ. ಕಳೆದ ಒಂದು ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರಿಗೆ ಡಾ. ದಿವಾಕರ್ ರಾವ್, ಡಾ ಸುನಿಲ್ ಶೆಟ್ಟಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ರಕ್ತ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿರುವುದರಿಂದ ಅವರಿಗೆ ಶೀಘ್ರ ಪ್ರಜ್ಞೆ ಮರಳುವ ನಿರೀಕ್ಷೆ ಇದೆ.