ಮಂಗಳೂರು: ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ‘ಸುಜ್ಞಾನನಿಧಿ ಶಿಷ್ಯವೇತನ’ ಕಾರ್ಯಕ್ರಮದ ಮೂಲಕ ಪ್ರಸಕ್ತ ವರ್ಷ 26,200 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.