<p>ಸುಳ್ಯ: ಮಳೆಗಾಲದ ತುರ್ತು ಸಂದರ್ಭ ತಾಲ್ಲೂಕು ಮಟ್ಟದ ಅಧಿ ಕಾರಿಗಳು ಸಂಘಟಿತರಾಗಿ ಕೆಲಸ ನಿರ್ವಹಿಸಿ ಪ್ರಾಕೃತಿಕ ವಿಕೋಪ ದಿಂದ ಉಂಟಾ ಗಬಹುದಾದ ಅನಾಹುತ ಗಳಿಂದ ಜನ– ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದು ಸುಳ್ಯ ತಹಶೀ ಲ್ದಾರ್ ಮಂಜುಳಾ ಎಂ. ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸುಳ್ಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿರಬೇಕು. ಸಮಸ್ಯೆ ಮಾಹಿತಿಯನ್ನು ತಾಲ್ಲೂಕು ಆಡಳಿತದ ಗಮನಕ್ಕೆ ತರಬೇಕು ಎಂದು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿ, ಪಂಚಾಯಿತಿ ಆಡಳಿತ ಅಧಿಕಾರಿಗಳು ಕಾರ್ಯಪಡೆ ಕಮಾಂಡರ್ಗಳಾಗಿ ಕಾರ್ಯಾಚರಿಸಲಿದ್ದು, ಪಂಚಾಯಿತಿ ಮಟ್ಟದಲ್ಲಿ ಸಭೆ ಕರೆದು ಆ ಸಭೆಯ ವರದಿ ನೀಡಬೇಕು ಎಂದು ಸೂಚಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ, ಪಶು ಸಂಗೋಪನಾ ಅಧಿಕಾರಿ, ಲೋಕೋ ಪಯೋಗಿ ಅಧಿಕಾರಿ, ಸುಳ್ಯ ತಾಲ್ಲೂಕು ಕಂದಾಯ ನಿರೀಕ್ಷಕರು ಇದ್ದರು. ಉಪತಹಶೀಲ್ದಾರ್ ಚಂದ್ರಕಾಂತ್ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-29-1889470180</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಳ್ಯ: ಮಳೆಗಾಲದ ತುರ್ತು ಸಂದರ್ಭ ತಾಲ್ಲೂಕು ಮಟ್ಟದ ಅಧಿ ಕಾರಿಗಳು ಸಂಘಟಿತರಾಗಿ ಕೆಲಸ ನಿರ್ವಹಿಸಿ ಪ್ರಾಕೃತಿಕ ವಿಕೋಪ ದಿಂದ ಉಂಟಾ ಗಬಹುದಾದ ಅನಾಹುತ ಗಳಿಂದ ಜನ– ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದು ಸುಳ್ಯ ತಹಶೀ ಲ್ದಾರ್ ಮಂಜುಳಾ ಎಂ. ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸುಳ್ಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿರಬೇಕು. ಸಮಸ್ಯೆ ಮಾಹಿತಿಯನ್ನು ತಾಲ್ಲೂಕು ಆಡಳಿತದ ಗಮನಕ್ಕೆ ತರಬೇಕು ಎಂದು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿ, ಪಂಚಾಯಿತಿ ಆಡಳಿತ ಅಧಿಕಾರಿಗಳು ಕಾರ್ಯಪಡೆ ಕಮಾಂಡರ್ಗಳಾಗಿ ಕಾರ್ಯಾಚರಿಸಲಿದ್ದು, ಪಂಚಾಯಿತಿ ಮಟ್ಟದಲ್ಲಿ ಸಭೆ ಕರೆದು ಆ ಸಭೆಯ ವರದಿ ನೀಡಬೇಕು ಎಂದು ಸೂಚಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ, ಪಶು ಸಂಗೋಪನಾ ಅಧಿಕಾರಿ, ಲೋಕೋ ಪಯೋಗಿ ಅಧಿಕಾರಿ, ಸುಳ್ಯ ತಾಲ್ಲೂಕು ಕಂದಾಯ ನಿರೀಕ್ಷಕರು ಇದ್ದರು. ಉಪತಹಶೀಲ್ದಾರ್ ಚಂದ್ರಕಾಂತ್ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-29-1889470180</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>