<p><strong>ಸುಳ್ಯ</strong>: ಇಲ್ಲಿನ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.</p>.<p>ಕೆಡಿಪಿ ನಾಮನಿರ್ದೇಶಿತ ಸದಸ್ಯ ಧರ್ಮಪಾಲ ಕೊಯಿಂಗಾಜೆ ಮಾತನಾಡಿ, ಕೆಡಿಪಿ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಪಡೆದು ಬಳಿಕ ಸಭೆ ನಡೆಸುವಂತೆ ಅಧ್ಯಕ್ಷರಿಗೆ ವಿನಂತಿಸಿದರು. ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚನೆ ನೀಡಿದರು.</p>.<p>ಕೆಲ ದಿನಗಳ ಹಿಂದೆ 2ನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ಮೃತಪಟ್ಟ ಬಗ್ಗೆ ಶಾಸಕಿ ಭಾಗೀರಥಿ ಅವರು ತಾಲ್ಲೂಕು ಆರೋಗ್ಯಾಧಿಕಾರಿ ತ್ರಿಮೂರ್ತಿ, ತಾಲ್ಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಕರುಣಾಕರ ಅವರನ್ನು ಪ್ರಶ್ನಿಸಿದರು.</p>.<p>ತಾಲ್ಲೂಕು ಆಸ್ಪತ್ರೆಯಲ್ಲಿ ಔಷಧಿ ಕೊರತೆ ಇದ್ದು, ಹೊರಗಡೆಯಿಂದ ಔಷಧಿ ಪಡೆಯುವಂತೆ ಹೊರ ರೋಗಿಗಳಿಗೆ ಚೀಟಿ ನೀಡಿ ಕಳುಹಿಸುತ್ತಿದ್ದು ಸರಿಯಲ್ಲ ಎಂದು ನಾಮನಿರ್ದೇಶಿತ ಸದಸ್ಯರು ತಿಳಿಸಿದರು.</p>.<p>ಸರ್ಕಾರಕ್ಕೆ ಪತ್ರ ಬರೆದು ಔಷಧಿ ತರಿಸುವಂತೆ ಕೋರಲು ನಿರ್ಣಯಿಸಲಾಯಿತು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಧಾಕರ ಮಾತನಾಡಿ, ವ್ಯಾಪ್ತಿಯಲ್ಲಿ ರಸ್ತೆ, ನದಿ ಪರಂಬೋಕುಗಳಲ್ಲಿ ಅಕ್ರಮ ಕಟ್ಟಡದ ಕುರಿತು ಜಂಟಿ ಸರ್ವೆ ನಡೆಸಿದ ಕುರಿತು ಮಾಹಿತಿ ನೀಡಿದರು.</p>.<p>ಪಟ್ಟಣ ಪಂಚಾಯಿತಿ ಸಿಬ್ಬಂದಿ, ಪ್ರತಿನಿಧಿಗಳು ಅಧ್ಯಯನ ಪ್ರವಾಸ ನಡೆಸಿರುವ ಔಚಿತ್ಯದ ಬಗ್ಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಧ್ಯಪ್ರದೇಶಿಸಿದ ಶಾಸಕಿ ನಮಗೂ ಅಧ್ಯಯನ ಪ್ರವಾಸಗಳು ಇರುತ್ತವೆ. ಅದು ಸರ್ಕಾರದ ಯೋಜನೆ ಎಂದರು.</p>.<p>ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಚರ್ಚೆಗೆ ವಿರಾಮ ನೀಡಿದರು.</p>.<p>ತಾಲ್ಲೂಕಿನಲ್ಲಿ ಬಾಧಿಸುತ್ರಿರುವ ಅಡಿಕೆ ಹಳದಿ ರೋಗದ ಅಧ್ಯಯನಕ್ಕೆ ಈಗಾಗಲೇ ತಂಡ ರಚಿಸಿ ಸಮೀಕ್ಷೆ ನಡೆಸಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿ ತಿಳಿಸಿದರು.</p>.<p>ಸುಳ್ಯದಲ್ಲಿ ನೂತನ ನಿರೀಕ್ಷಣಾ ಮಂದಿರ, ಪಯಸ್ವಿನಿ ನದಿಯಲ್ಲಿನ ಮೀನುಗಳ ಮಾರಣಹೋಮ, ಗಾಂಧಿನಗರ ಶಾಲೆಯ ಬಳಿಯ ವಿದ್ಯುತ್ ಕಂಬ, ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳ ವಾರ್ಡನ್ ಕೊರತೆ ಕುರಿತು ಚರ್ಚೆ ನಡೆಯಿತು.</p>.<p>ಸುಳ್ಯಕ್ಕೆ ಪ್ರತ್ಯೇಕ ಸರ್ಕಾರಿ ರಕ್ತ ಶೇಖರಣಾ ಘಟಕ ಸ್ಥಾಪನೆಗೆ ಒತ್ತಾಯಿಸಿ ಪತ್ರ ಬರೆಯಲು ನಿರ್ಣಯಿಸಿ, ಸಚಿವರ ಜೊತೆಗೆ ಮಾತನಾಡುವುದಾಗಿ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನೀರಬಿದರೆ, ತಹಶೀಲ್ದಾರ್ ಮಂಜುಳಾ ಎಂ., ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಧರ್ಮಪಾಲ ಕೊಯಿಂಗಾಜೆ, ಅಶ್ರಫ್ ಗುಂಡಿ, ಪರಮೇಶ್ವರ ಕೆಂಬಾರೆ, ತೀರ್ಥರಾಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳ್ಯ</strong>: ಇಲ್ಲಿನ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.</p>.<p>ಕೆಡಿಪಿ ನಾಮನಿರ್ದೇಶಿತ ಸದಸ್ಯ ಧರ್ಮಪಾಲ ಕೊಯಿಂಗಾಜೆ ಮಾತನಾಡಿ, ಕೆಡಿಪಿ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಭಾಗವಹಿಸಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಪಡೆದು ಬಳಿಕ ಸಭೆ ನಡೆಸುವಂತೆ ಅಧ್ಯಕ್ಷರಿಗೆ ವಿನಂತಿಸಿದರು. ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚನೆ ನೀಡಿದರು.</p>.<p>ಕೆಲ ದಿನಗಳ ಹಿಂದೆ 2ನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ಮೃತಪಟ್ಟ ಬಗ್ಗೆ ಶಾಸಕಿ ಭಾಗೀರಥಿ ಅವರು ತಾಲ್ಲೂಕು ಆರೋಗ್ಯಾಧಿಕಾರಿ ತ್ರಿಮೂರ್ತಿ, ತಾಲ್ಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಕರುಣಾಕರ ಅವರನ್ನು ಪ್ರಶ್ನಿಸಿದರು.</p>.<p>ತಾಲ್ಲೂಕು ಆಸ್ಪತ್ರೆಯಲ್ಲಿ ಔಷಧಿ ಕೊರತೆ ಇದ್ದು, ಹೊರಗಡೆಯಿಂದ ಔಷಧಿ ಪಡೆಯುವಂತೆ ಹೊರ ರೋಗಿಗಳಿಗೆ ಚೀಟಿ ನೀಡಿ ಕಳುಹಿಸುತ್ತಿದ್ದು ಸರಿಯಲ್ಲ ಎಂದು ನಾಮನಿರ್ದೇಶಿತ ಸದಸ್ಯರು ತಿಳಿಸಿದರು.</p>.<p>ಸರ್ಕಾರಕ್ಕೆ ಪತ್ರ ಬರೆದು ಔಷಧಿ ತರಿಸುವಂತೆ ಕೋರಲು ನಿರ್ಣಯಿಸಲಾಯಿತು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಧಾಕರ ಮಾತನಾಡಿ, ವ್ಯಾಪ್ತಿಯಲ್ಲಿ ರಸ್ತೆ, ನದಿ ಪರಂಬೋಕುಗಳಲ್ಲಿ ಅಕ್ರಮ ಕಟ್ಟಡದ ಕುರಿತು ಜಂಟಿ ಸರ್ವೆ ನಡೆಸಿದ ಕುರಿತು ಮಾಹಿತಿ ನೀಡಿದರು.</p>.<p>ಪಟ್ಟಣ ಪಂಚಾಯಿತಿ ಸಿಬ್ಬಂದಿ, ಪ್ರತಿನಿಧಿಗಳು ಅಧ್ಯಯನ ಪ್ರವಾಸ ನಡೆಸಿರುವ ಔಚಿತ್ಯದ ಬಗ್ಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಧ್ಯಪ್ರದೇಶಿಸಿದ ಶಾಸಕಿ ನಮಗೂ ಅಧ್ಯಯನ ಪ್ರವಾಸಗಳು ಇರುತ್ತವೆ. ಅದು ಸರ್ಕಾರದ ಯೋಜನೆ ಎಂದರು.</p>.<p>ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಚರ್ಚೆಗೆ ವಿರಾಮ ನೀಡಿದರು.</p>.<p>ತಾಲ್ಲೂಕಿನಲ್ಲಿ ಬಾಧಿಸುತ್ರಿರುವ ಅಡಿಕೆ ಹಳದಿ ರೋಗದ ಅಧ್ಯಯನಕ್ಕೆ ಈಗಾಗಲೇ ತಂಡ ರಚಿಸಿ ಸಮೀಕ್ಷೆ ನಡೆಸಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿ ತಿಳಿಸಿದರು.</p>.<p>ಸುಳ್ಯದಲ್ಲಿ ನೂತನ ನಿರೀಕ್ಷಣಾ ಮಂದಿರ, ಪಯಸ್ವಿನಿ ನದಿಯಲ್ಲಿನ ಮೀನುಗಳ ಮಾರಣಹೋಮ, ಗಾಂಧಿನಗರ ಶಾಲೆಯ ಬಳಿಯ ವಿದ್ಯುತ್ ಕಂಬ, ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳ ವಾರ್ಡನ್ ಕೊರತೆ ಕುರಿತು ಚರ್ಚೆ ನಡೆಯಿತು.</p>.<p>ಸುಳ್ಯಕ್ಕೆ ಪ್ರತ್ಯೇಕ ಸರ್ಕಾರಿ ರಕ್ತ ಶೇಖರಣಾ ಘಟಕ ಸ್ಥಾಪನೆಗೆ ಒತ್ತಾಯಿಸಿ ಪತ್ರ ಬರೆಯಲು ನಿರ್ಣಯಿಸಿ, ಸಚಿವರ ಜೊತೆಗೆ ಮಾತನಾಡುವುದಾಗಿ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನೀರಬಿದರೆ, ತಹಶೀಲ್ದಾರ್ ಮಂಜುಳಾ ಎಂ., ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಧರ್ಮಪಾಲ ಕೊಯಿಂಗಾಜೆ, ಅಶ್ರಫ್ ಗುಂಡಿ, ಪರಮೇಶ್ವರ ಕೆಂಬಾರೆ, ತೀರ್ಥರಾಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>