<p><strong>ಬಂಟ್ವಾಳ:</strong> ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಕೊ–ಆಪರೇಟಿವ್ ಸೊಸೈಟಿ ಕಳೆದ ಸಾಲಿನಲ್ಲಿ ಸುಮಾರು ₹ 360.19 ಕೋಟಿ ವ್ಯವಹಾರ ನಡೆಸಿ, ₹ 1.61 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ 14ರಷ್ಟು ಲಾಭಾಂಶ ನೀಡಲಾಗುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ ಹೇಳಿದರು.</p>.<p>ಇಲ್ಲಿನ ಪಾಣೆಮಂಗಳೂರಿನಲ್ಲಿ ಸುಮಂಗಲಾ ಕ್ರೆಡಿಟ್ ಕೊ–ಆಪರೇಟಿವ್ ಸೊಸೈಟಿ ವತಿಯಿಂದ ನಡೆದ 32ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>9 ಶಾಖೆಗಳನ್ನು ಹೊಂದಿರುವ ಸೊಸೈಟಿಯು ಗೃಹ ನಿರ್ಮಾಣ, ವಾಹನ ಖರೀದಿ, ಜಮೀನು ಮತ್ತು ಚಿನ್ನಾಭರಣ ಅಡಮಾನ ಸಾಲ ಸೇರಿದಂತೆ ಒಟ್ಟು ₹ 73.21 ಕೋಟಿ ಮೊತ್ತದ ಸಾಲ ವಿತರಿಸಿ ಶೇ 94ರಷ್ಟು ಸಾಲ ವಸೂಲಾತಿ ಆಗಿದೆ ಎಂದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸತತ 4ನೇ ಬಾರಿಗೆ ಸಾಧನಾ ಪ್ರಶಸ್ತಿ ಸಿಕ್ಕಿದೆ ಎಂದರು.</p>.<p>ಬಂಟ್ವಾಳ ತಾಲ್ಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಮಾತನಾಡಿದರು.</p>.<p>ಸಿಇಒ ವಸಂತ ಲೆಕ್ಕಪತ್ರ ಮಂಡಿಸಿದರು. ಸಂಘದ ಉಪಾಧ್ಯಕ್ಷ ಪದ್ಮನಾಭ ಇಡ್ಕಿದು, ನಿರ್ದೇಶಕರಾದ ಕೃಷ್ಣಪ್ಪ ಗಾಣಿಗ, ಸದಾಶಿವ ಪುತ್ರನ್, ದಾಮೋದರ ಸಪಲ್ಯ, ಈಶ್ವರ ಮೆಲ್ಕಾರ್, ಸಂದೀಪ್ ಕುಮಾರ್, ರವೀಂದ್ರ ಸಪಲ್ಯ, ಶರತ್ ಎಚ್., ಯಶೋದಾ ಬಿ.ಕೆ., ಬಬಿತಾ ಮೆಲ್ಕಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಕೊ–ಆಪರೇಟಿವ್ ಸೊಸೈಟಿ ಕಳೆದ ಸಾಲಿನಲ್ಲಿ ಸುಮಾರು ₹ 360.19 ಕೋಟಿ ವ್ಯವಹಾರ ನಡೆಸಿ, ₹ 1.61 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ 14ರಷ್ಟು ಲಾಭಾಂಶ ನೀಡಲಾಗುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ ಹೇಳಿದರು.</p>.<p>ಇಲ್ಲಿನ ಪಾಣೆಮಂಗಳೂರಿನಲ್ಲಿ ಸುಮಂಗಲಾ ಕ್ರೆಡಿಟ್ ಕೊ–ಆಪರೇಟಿವ್ ಸೊಸೈಟಿ ವತಿಯಿಂದ ನಡೆದ 32ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>9 ಶಾಖೆಗಳನ್ನು ಹೊಂದಿರುವ ಸೊಸೈಟಿಯು ಗೃಹ ನಿರ್ಮಾಣ, ವಾಹನ ಖರೀದಿ, ಜಮೀನು ಮತ್ತು ಚಿನ್ನಾಭರಣ ಅಡಮಾನ ಸಾಲ ಸೇರಿದಂತೆ ಒಟ್ಟು ₹ 73.21 ಕೋಟಿ ಮೊತ್ತದ ಸಾಲ ವಿತರಿಸಿ ಶೇ 94ರಷ್ಟು ಸಾಲ ವಸೂಲಾತಿ ಆಗಿದೆ ಎಂದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸತತ 4ನೇ ಬಾರಿಗೆ ಸಾಧನಾ ಪ್ರಶಸ್ತಿ ಸಿಕ್ಕಿದೆ ಎಂದರು.</p>.<p>ಬಂಟ್ವಾಳ ತಾಲ್ಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಮಾತನಾಡಿದರು.</p>.<p>ಸಿಇಒ ವಸಂತ ಲೆಕ್ಕಪತ್ರ ಮಂಡಿಸಿದರು. ಸಂಘದ ಉಪಾಧ್ಯಕ್ಷ ಪದ್ಮನಾಭ ಇಡ್ಕಿದು, ನಿರ್ದೇಶಕರಾದ ಕೃಷ್ಣಪ್ಪ ಗಾಣಿಗ, ಸದಾಶಿವ ಪುತ್ರನ್, ದಾಮೋದರ ಸಪಲ್ಯ, ಈಶ್ವರ ಮೆಲ್ಕಾರ್, ಸಂದೀಪ್ ಕುಮಾರ್, ರವೀಂದ್ರ ಸಪಲ್ಯ, ಶರತ್ ಎಚ್., ಯಶೋದಾ ಬಿ.ಕೆ., ಬಬಿತಾ ಮೆಲ್ಕಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>