<p>ಮಂಗಳೂರು: ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ಡೌನ್ ವಿಧಿಸಲಾಗಿದೆ. ಈ ಲಾಕ್ಡೌನ್ ಮಧ್ಯೆ ಭಾನುವಾರದ ಸಂಪೂರ್ಣ ಲಾಕ್ಡೌನ್ ಮತ್ತಷ್ಟು ಕಟ್ಟುನಿಟ್ಟಾಗಿತ್ತು. ಜನರೇ ಸ್ವಯಂ ಪ್ರೇರಿತರಾಗಿ ಮನೆಯಲ್ಲಿಯೇ ಉಳಿದಿದ್ದು, ಭಾನುವಾರ ಬೆಳಿಗ್ಗೆಯಿಂದಲೇ ನಗರವು ಬಹುತೇಕ ಸ್ತಬ್ಧವಾಗಿತ್ತು.</p>.<p>ಹಾಲು, ವೈದ್ಯಕೀಯ ಸೇವೆ, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿತ್ತು. ಉಳಿದ ಎಲ್ಲ ಅಂಗಡಿಗಳು ಬಂದ್ ಆಗಿದ್ದು, ಮಾರುಕಟ್ಟೆ ಪ್ರದೇಶಗಲ್ಲಿ ಜನರು, ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಎಲ್ಲೆಡೆ ನಂದಿನಿ ಪಾರ್ಲರ್ಗಳು ತೆರೆದಿದ್ದು, ಕೆಲ ಗ್ರಾಹಕರು ಹಾಲು, ಹಾಲಿನ ಉತ್ಪನ್ನ ಖರೀದಿ ಮಾಡಿದರು.</p>.<p>ಒಂದು ವಾರದ ಲಾಕ್ಡೌನ್ ಇದ್ದರೂ ಬೆಳಿಗ್ಗೆ 8ರಿಂದ 11 ಗಂಟೆಯವರೆಗೆ ತರಕಾರಿ ಸೇರಿದಂತೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಭಾನುವಾರ ಇದಕ್ಕೆ ಅನುಮತಿ ಇರಲಿಲ್ಲ. ಬೆಳಿಗ್ಗೆ 11 ಗಂಟೆಯವರೆಗೆ ಹಾಲು ಖರೀದಿಗೆ ಅವಕಾಶ ನೀಡಲಾಗಿತ್ತು.</p>.<p>ಮಂಗಳೂರು ನಗರ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದ್ದು, ನಗರದ ಹಲವೆಡೆ ನಾಕಾಬಂದಿ ಮಾಡಲಾಗಿತ್ತು. ಅನಗತ್ಯವಾಗಿ ಓಡಾಡುವವರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿ, ವಾಪಸ್ ಕಳುಹಿಸಿದರು. ಭಾನುವಾರದ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದ್ದು, ಪೊಲೀಸ್ ಇಲಾಖೆಯಿಂದ ವಿವಿಧ ಸ್ಥಳಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.</p>.<p>ನಗರದ ಹಂಪನಕಟ್ಟೆ, ಎಂ.ಜಿ. ರಸ್ತೆ, ಪಿವಿಎಸ್ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ಎಲ್ಲ ರಸ್ತೆಗಳು ಬಹುತೇಕ ಖಾಲಿಯಾಗಿದ್ದವು. ಕೆಲವೇ ಕೆಲವು ವಾಹನಗಳು ಅಲ್ಲಲ್ಲಿ ಓಡಾಡುತ್ತಿರುವುದು ಕಂಡು ಬಂತು. ಮಧ್ಯಾಹ್ನದ ನಂತರವಂತೂ ನಗರ ಸಂಪೂರ್ಣವಾಗಿ ಬಂದ್ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ಡೌನ್ ವಿಧಿಸಲಾಗಿದೆ. ಈ ಲಾಕ್ಡೌನ್ ಮಧ್ಯೆ ಭಾನುವಾರದ ಸಂಪೂರ್ಣ ಲಾಕ್ಡೌನ್ ಮತ್ತಷ್ಟು ಕಟ್ಟುನಿಟ್ಟಾಗಿತ್ತು. ಜನರೇ ಸ್ವಯಂ ಪ್ರೇರಿತರಾಗಿ ಮನೆಯಲ್ಲಿಯೇ ಉಳಿದಿದ್ದು, ಭಾನುವಾರ ಬೆಳಿಗ್ಗೆಯಿಂದಲೇ ನಗರವು ಬಹುತೇಕ ಸ್ತಬ್ಧವಾಗಿತ್ತು.</p>.<p>ಹಾಲು, ವೈದ್ಯಕೀಯ ಸೇವೆ, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿತ್ತು. ಉಳಿದ ಎಲ್ಲ ಅಂಗಡಿಗಳು ಬಂದ್ ಆಗಿದ್ದು, ಮಾರುಕಟ್ಟೆ ಪ್ರದೇಶಗಲ್ಲಿ ಜನರು, ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಎಲ್ಲೆಡೆ ನಂದಿನಿ ಪಾರ್ಲರ್ಗಳು ತೆರೆದಿದ್ದು, ಕೆಲ ಗ್ರಾಹಕರು ಹಾಲು, ಹಾಲಿನ ಉತ್ಪನ್ನ ಖರೀದಿ ಮಾಡಿದರು.</p>.<p>ಒಂದು ವಾರದ ಲಾಕ್ಡೌನ್ ಇದ್ದರೂ ಬೆಳಿಗ್ಗೆ 8ರಿಂದ 11 ಗಂಟೆಯವರೆಗೆ ತರಕಾರಿ ಸೇರಿದಂತೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಭಾನುವಾರ ಇದಕ್ಕೆ ಅನುಮತಿ ಇರಲಿಲ್ಲ. ಬೆಳಿಗ್ಗೆ 11 ಗಂಟೆಯವರೆಗೆ ಹಾಲು ಖರೀದಿಗೆ ಅವಕಾಶ ನೀಡಲಾಗಿತ್ತು.</p>.<p>ಮಂಗಳೂರು ನಗರ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದ್ದು, ನಗರದ ಹಲವೆಡೆ ನಾಕಾಬಂದಿ ಮಾಡಲಾಗಿತ್ತು. ಅನಗತ್ಯವಾಗಿ ಓಡಾಡುವವರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿ, ವಾಪಸ್ ಕಳುಹಿಸಿದರು. ಭಾನುವಾರದ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದ್ದು, ಪೊಲೀಸ್ ಇಲಾಖೆಯಿಂದ ವಿವಿಧ ಸ್ಥಳಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.</p>.<p>ನಗರದ ಹಂಪನಕಟ್ಟೆ, ಎಂ.ಜಿ. ರಸ್ತೆ, ಪಿವಿಎಸ್ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ಎಲ್ಲ ರಸ್ತೆಗಳು ಬಹುತೇಕ ಖಾಲಿಯಾಗಿದ್ದವು. ಕೆಲವೇ ಕೆಲವು ವಾಹನಗಳು ಅಲ್ಲಲ್ಲಿ ಓಡಾಡುತ್ತಿರುವುದು ಕಂಡು ಬಂತು. ಮಧ್ಯಾಹ್ನದ ನಂತರವಂತೂ ನಗರ ಸಂಪೂರ್ಣವಾಗಿ ಬಂದ್ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>