ವೆಂಕಟೇಶ್ ಅವರ ಮಾವ ಈಚೆಗೆ ನಿಧನರಾಗಿದ್ದು, ತಿಥಿಯ ಪಿಂಡ ಪ್ರದಾನ ಮಾಡಲೆಂದು ಕುಟುಂಬಿಕರು ಎನ್ಐಟಿಕೆ ಸಮುದ್ರ ಕಿನಾರೆಗೆ ಬಂದಿದ್ದರು. ಪಿಂಡ ಪ್ರದಾನ ಮಾಡಿದ ಬಳಿಕ ವೆಂಕಟೇಶ್, ಅವರ ಪುತ್ರಿ ವೈಷ್ಣವಿ ಹಾಗೂ ತಮ್ಮನ ಪುತ್ರಿ ತ್ರಿಶಾ ಸಮುದ್ರಕ್ಕೆ ಇಳಿದಿದ್ದಾರೆ. ಈ ಸಂದರ್ಭ ಬಂದ ಬೃಹತ್ ಅಲೆಗೆ ಸಿಲುಕಿ ಮೂವರು ಸಮುದ್ರಪಾಲಾದರು.