‘ ಬಿ.ಆರ್.ಅಂಬೇಡ್ಕರ್ ಮೊದಲಾದ ವಿವಾದರಹಿತ ನಾಯಕರ ಹೆಸರನ್ನು ವೃತ್ತಕ್ಕೆ ಇಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಈಗ ಹಾಕಿರುವ ಫ್ಲೆಕ್ಸ್ ತೆರವುಗೊಳಿಸದಿದ್ದರೆ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಪಕ್ಷದ ಮುಖಂಡರು ಎಚ್ಚರಿಕೆ ನೀಡಿದರು. ಈ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದ ಪೊಲೀಸರು, ‘ಇದು ಮಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದ ವಿಚಾರ. ಇದನ್ನು ಅವರೇ ತೆರವುಗೊಳಿಸಬೇಕು’ ಎಂದು ಪ್ರತಿಕ್ರಿಯಿಸಿದ್ದರು. ಇದರಿಂದ ಸಿಟ್ಟಿಗೆದ್ದ ಪಕ್ಷದ ಕೆಲವು ಕಾರ್ಯಕರ್ತರು, ‘ಟಿಪ್ಪು ಸುಲ್ತಾನ್ ವೃತ್ತ’ ಎಂಬ ಇನ್ನೊಂದು ಪ್ಲೆಕ್ಸ್ ಅನ್ನು ಸ್ಥಳದಲ್ಲಿ ಅಳವಡಿಸಲು ಮುಂದಾಗಿದ್ದರು.