ಮದ್ಯದಂಗಡಿ ಬಂದ್: ಜಿಲ್ಲೆಯಾದ್ಯಂತ ಜುಲೈ 29ರಿಂದ ಅನ್ವಯವಾಗುವಂತೆ ಆಗಸ್ಟ್ 1ರ ಬೆಳಿಗ್ಗೆ 8 ಗಂಟೆಯವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಣೆ ಮಾಡುವಂತಿಲ್ಲ. ಬಾರ್, ವೈನ್ ಶಾಪ್ ಸೇರಿದಂತೆ ಎಲ್ಲ ಅಂಗಡಿಗಳನ್ನು ಮುಚ್ಚಬೇಕು. ಈ ಆದೇಶವನ್ನು ಅಬಕಾರಿ ಇಲಾಖೆಯ ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದ್ದಾರೆ.