<p><strong>ಮಂಗಳೂರು</strong>: ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ನಡೆಯಲಿರುವ ಸರ್ಫಿಂಗ್ ವೇಳೆ ಅಪಾಯ, ಅವಘಡಗಳು ಸಂಭವಿಸದಂತೆ ಆಯೋಜಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.</p>.<p>ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಡೆಯುವ ‘ನ್ಯಾಷನಲ್ ಸರ್ಫಿಂಗ್ ಫೆಸ್ಟಿವಲ್– 2022’ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಸಮುದ್ರದ ಅಲೆಗಳ ಮೇಲೆ ಆಡುವ ಕ್ರೀಡೆಯಲ್ಲಿ ಹೆಚ್ಚಿನ ಜಾಗ್ರತೆ ಅವಶ್ಯ. ಲೈಫ್ಗಾರ್ಡ್ಗಳು, ಆಂಬುಲೆನ್ಸ್, ಮೆಡಿಕಲ್ ಪರಿಕರವಿರುವ ವಾಹನ, ಜೀವರಕ್ಷಕ ಸಾಧನಗಳು, ದೋಣಿಗಳು ಸೇರಿದಂತೆ ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆತ ಸಾಧನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಯಾವುದೇ ಅವಘಡಗಳು ಆಗದಂತೆ ಎನ್ಎಂಪಿಟಿ, ಕರಾವಳಿ ಕಾವಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿಯು ಎಚ್ಚರ ವಹಿಸಬೇಕು. ಸರ್ಫಿಂಗ್ ಯಶಸ್ವಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು. ಈ ಸಾಹಸ ಕ್ರೀಡೆಗಳು ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಬೇಕು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಅದಕ್ಕಾಗಿ ಸಮೂಹ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯವನ್ನು ಮಾಡಬೇಕು ಎಂದರು.</p>.<p>ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ರಾಮ್ ಮೋಹನ್, ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿ ಗೌರವ ಹೆಗ್ಡೆ, ಎನ್ಎಂಪಿಟಿ ಸಿವಿಲ್ ಎಂಜಿನಿಯರ್ ಶಶಿಧರ್ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ನಡೆಯಲಿರುವ ಸರ್ಫಿಂಗ್ ವೇಳೆ ಅಪಾಯ, ಅವಘಡಗಳು ಸಂಭವಿಸದಂತೆ ಆಯೋಜಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.</p>.<p>ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಡೆಯುವ ‘ನ್ಯಾಷನಲ್ ಸರ್ಫಿಂಗ್ ಫೆಸ್ಟಿವಲ್– 2022’ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಸಮುದ್ರದ ಅಲೆಗಳ ಮೇಲೆ ಆಡುವ ಕ್ರೀಡೆಯಲ್ಲಿ ಹೆಚ್ಚಿನ ಜಾಗ್ರತೆ ಅವಶ್ಯ. ಲೈಫ್ಗಾರ್ಡ್ಗಳು, ಆಂಬುಲೆನ್ಸ್, ಮೆಡಿಕಲ್ ಪರಿಕರವಿರುವ ವಾಹನ, ಜೀವರಕ್ಷಕ ಸಾಧನಗಳು, ದೋಣಿಗಳು ಸೇರಿದಂತೆ ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆತ ಸಾಧನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಯಾವುದೇ ಅವಘಡಗಳು ಆಗದಂತೆ ಎನ್ಎಂಪಿಟಿ, ಕರಾವಳಿ ಕಾವಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿಯು ಎಚ್ಚರ ವಹಿಸಬೇಕು. ಸರ್ಫಿಂಗ್ ಯಶಸ್ವಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು. ಈ ಸಾಹಸ ಕ್ರೀಡೆಗಳು ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಬೇಕು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಅದಕ್ಕಾಗಿ ಸಮೂಹ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯವನ್ನು ಮಾಡಬೇಕು ಎಂದರು.</p>.<p>ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ರಾಮ್ ಮೋಹನ್, ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿ ಗೌರವ ಹೆಗ್ಡೆ, ಎನ್ಎಂಪಿಟಿ ಸಿವಿಲ್ ಎಂಜಿನಿಯರ್ ಶಶಿಧರ್ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>